ಕೈಗಾರಿಕಾ ಪ್ರದೇಶಾಭಿವೃದ್ಧಿ ಸ್ಥಳಕ್ಕೆ ಶಾಸಕರ ಭೇಟಿ

ಶಿರಾ

    ಶಿರಾ ನಗರದ ಮುದಿಗೆರೆ ಕಾವಲ್ ಸರ್ವೆ ನಂಬರ್‍ನ ಜಮೀನಿನಲ್ಲಿ ಸುಮಾರು 82 ಕೋಟಿ ರೂ.ಗಳ ವೆಚ್ಚದಲ್ಲಿ ನಡೆಯುತ್ತಿರುವ ಕೈಗಾರಿಕಾ ಪ್ರದೇಶಾಭಿವೃದ್ಧಿ ಸ್ಥಳಕ್ಕೆ ಶಾಸಕ ಬಿ.ಸತ್ಯನಾರಾಯಣ್ ಸೋಮವಾರ ಭೇಟಿ ನೀಡಿದರು.

    ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಡಾಂಬರ್, ಜಲ್ಲಿ ಸಂಗ್ರಹಣಾ ಕಾರ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕರು, 82 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೈಗಾರಿಕಾ ಪ್ರದೇಶದಲ್ಲಿನ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಲಾಗಿದೆ. ಸದರಿ ಕಾಮಗಾರಿಯು ತ್ವರಿತಗತಿಯಲ್ಲಿ ನಡೆಯುವಂತೆಯೂ ಸೂಚಿಸಲಾಗಿದೆ ಎಂದರು.

    ಮಳೆ-ಬೆಳೆಗಳ ವೈಫಲ್ಯದಿಂದಾಗಿ ಈ ಭಾಗದ ಜನ ಸಂಕಟದಲ್ಲಿದ್ದು, ನಿರುದ್ಯೋಗಿಗಳಿಗೆ ಈ ಕೈಗಾರಿಕಾ ಪ್ರದೇಶದ ಅಭಿವೃದ್ಧಿಯಿಂದ ಉದ್ಯೋಗ ಲಭಿಸಿದಂತಾಗುತ್ತದೆ ಎಂದರು. ಜಿ.ಪಂ. ಮಾಜಿ ಉಪಾಧ್ಯಕ್ಷ ಮುದಿಮಡು ರಂಗಸ್ವಾಮಯ್ಯ, ಬಂಡೆ ರಾಮಕೃಷ್ಣ, ಹಂದಿಕುಂಟೆ ಚಂದ್ರಶೇಖರ್, ಕೆಂಚೇಗೌಡ ಮುಂತಾದವರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap