ಮೊಂಬತ್ತಿ ಬೆಳಕಿನಲ್ಲಿ ಮತದಾನ ಜಾಗೃತಿ

ಬಳ್ಳಾರಿ

        ಲೋಕಸಭಾ ಚುನಾವಣೆ -2019ರಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ,ನೈತಿಕ ಮತದಾನಕ್ಕೆ ಹೆಚ್ಚಿನ ಒತ್ತು ಕೊಡುವ ಹಾಗೂ ಮತದಾನದ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ವೀಪ್ ಸಮಿತಿ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಬುಧವಾರ ಸಂಜೆ ನಡೆದ ಮೆಣದ ಬತ್ತಿ ಮೆರವಣಿಗೆ ಗಮನಸೆಳೆಯಿತು.

       ಮಹಾನಗರ ಪಾಲಿಕೆ ಸಿಬ್ಬಂದಿ , ಸಾರ್ವಜನಿಕರು ಸೇರಿದಂತೆ ಸಾವಿರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮಹಾನಗರ ಪಾಲಿಕೆ ಆವರಣದಿಂದ ಆರಂಭವಾದ ಮೆರವಣಿಗೆಯು ಗಡಗಿ ಚನ್ನಪ್ಪ ವೃತ್ತದ ಮುಖಾಂತರ ಬೆಂಗಳೂರು ರಸ್ತೆ ಮಾರ್ಗವಾಗಿ ಬ್ರೂಸ್ ಪೇಟೆ ಪೊಲೀಸ್ ಠಾಣೆವರೆಗೆ ನಡೆಯಿತು. ಮೆಣದ ಬತ್ತಿ ಕೈಯಲ್ಲಿಡಿದು ಅದರ ಬೆಳಗಿನಲ್ಲಿ ನಡೆಯುತ್ತಾ ಮತದಾನದ ಮಹತ್ವ ಸಾರುವ ಸಂದೇಶಗಳನ್ನು ಕೂಗುತ್ತಾ ತೆರಳಿದರು.

       ಜಾಗೃತಿ ಮೂಡಿಸುವ ಈ ಮೆರವಣಿಗೆಗೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ತುಷಾರಮಣಿ ಅವರು ನೈತಿಕ ಮತದಾನಕ್ಕೆ ಒತ್ತು ನೀಡುವ ಹಾಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನ ಶೇಕಡಾವಾರು ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಮೊಂಬತ್ತಿ ಬೆಳಗಿನ ಮೆರವಣಿಗೆ ಆಯೋಜಿಸಲಾಗಿದೆ ಎಂದರು.

       ಸ್ವೀಪ್ ಸಮಿತಿ ಹಾಗೂ ಮಹಾನಗರ ಪಾಲಿಕೆ ಜಂಟಿಯಾಗಿ ಮತದಾನ ಮಹತ್ವ ಹಾಗೂ ಮತದಾರರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಶೇಕಡಾವಾರು ಪ್ರಮಾಣ ಹೆಚ್ಚಳವಾಗಲಿದೆ ಎಂಬ ಆಶಾಭಾವನೆಯನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣೆಗೆ ನಿಯೋಜಿತರಾದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link