ಯಡಿಯೂರಪ್ಪಾ ಅವರೇ , ಬಿಜೆಪಿ ಗೂಂಡಾಗಿರಿ ನಿಯಂತ್ರಿಸಿ : ಸಿದ್ದರಾಮಯ್ಯ

ಬೆಂಗಳೂರು

     ಶಿಕ್ಷಣ ಸಂಸ್ಥೆಗಳು ಜ್ಞಾನದ ಪ್ರಸಾರ ಕೇಂದ್ರಗಳು, ವಿಮರ್ಶಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವದ ಮೂಲವಾಗಿದೆ. ಬಿಜೆಪಿಯ ಸಿದ್ಧಾಂತವು ಫ್ಯಾಸಿಸಂನ ದುರ್ಬಲ ಅಡಿಪಾಯದಲ್ಲಿದೆ. ನಮ್ಮ ವಿಶ್ವವಿದ್ಯಾಲಯಗಳ ಜ್ಞಾನದ ನೆಲೆಯಿಂದ ಬಿಜೆಪಿಗೆ ಬೆದರಿಕೆ ಇದೆ. ಆದ್ದರಿಂದ ಅವುಗಳನ್ನು ಮಟ್ಟಹಾಕಲು ಮತ್ತು ದುರ್ಬಲಗೊಳಿಸಲು ಅವರು ಬಯಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

     ಬಿಜೆಪಿಯ ಗೂಂಡಾಗಳು ಬೆಂಗಳೂರಿನ ಜ್ಯೋತಿನಿವಾಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಎಎಗೆ ಬೆಂಬಲ ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ಯಡಿಯೂರಪ್ಪ ಅವರೇ, ನಿಮ್ಮ ಪಕ್ಷದ ಗೂಂಡಾಗಿರಿಗಳನ್ನು ನಿಯಂತ್ರಿಸಲು ನಾನು ನಿಮಗೆ ಒತ್ತಾಯಿಸುತ್ತಿದ್ದೇನೆ. ನಿಮ್ಮ ಸ್ವಾರ್ಥ ಉದ್ದೇಶಗಳಿಗಾಗಿ ಜ್ಞಾನ ಮತ್ತು ಶಿಕ್ಷಣ ಸಂಸ್ಥೆಗಳನ್ನು ಮಟ್ಟಹಾಕಬೇಡಿ. ಕರ್ನಾಟಕದಲ್ಲಿ ನಿಮ್ಮ ಹಿಟ್ಲರ್ ಆಡಳಿತಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap