ಬೆಂಗಳೂರು:
ತಡರಾತ್ರಿ ರೌಡಿಶೀಟರ್ ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ನಗರದ ಆಡುಗೋಡಿಯ ಎಲ್ ಆರ್ ನಗರದಲ್ಲಿ ನಡೆದಿದೆ.ಎಡ್ವಿನ್ ಅಲಿಯಾಸ್ ಅಲೆಗ್ಸಾಂಡರ್ (34) ಕೊಲೆಯಾದ ರೌಡಿಶೀಟರ್.
ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಎಡ್ವಿನ್, ಕಳೆದ ಕೆಲ ತಿಂಗಳಿನಿಂದ ತನ್ನ ಪತ್ನಿ ಬುಡ್ಡೊಳನ್ನು ತವರು ಮನೆಯಲ್ಲಿಯೇ ಬಿಟ್ಟು ಚೈನ್ನೈನಲ್ಲಿ ಕೆಲಸ ಮಾಡಿಕೊಂಡಿದ್ದನು.
ಕಳೆದ ರಾತ್ರಿ ಆಡುಗೋಡಿಯ ಎಲ್ ಆರ್ ನಗರದಲ್ಲಿ ಪತ್ನಿ ಬುಡ್ಡೊಳನ್ನು ಕರೆದೊಯ್ಯಲು ಬಂದಿದ್ದಾನೆ. ಈ ವೇಳೆ ಪತಿಯೊಂದಿಗೆ ತೆರಳಲು ಪತ್ನಿ ನಿರಾಕರಿಸಿದ್ದು, ಮಾತಿಗೆ ಮಾತು ಬೆಳೆದಿದೆ. ನಂತರ ಗಲಾಟೆ ಶುರುವಾಗಿ ಎಡ್ವಿನ್ಗೆ ಆತನ ಬಾಮೈದ ಪತ್ಚಾನಿ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಎಡ್ವಿನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಆಡುಗೋಡಿ ಪೊಲೀಸರು, ಪತ್ನಿ ಬುಡ್ಡೋ ಮತ್ತು ಬಾಮೈದಾ ಜಗದೀಶ್ ಅನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.ಇನ್ನು ರೌಡಿ ಎಡ್ವಿನ್ ಸುಲಿಗೆ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು, ಈತನ ಮೇಲೆ ಹಲವಾರು ಠಾಣೆಗಳಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
