ದಾವಣಗೆರೆ:
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಬಿ.ಮಂಜಪ್ಪನವರ ಗೆಲುವಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಮುದ್ದಾಪುರ ರೆಹಮಾನ್ ತಿಳಿಸಿದ್ದಾರೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು ಪಕ್ಷ ಸಂಘಟಿಸಿ, ಅಭ್ಯರ್ಥಿ ಮಂಜಪ್ಪನವರನ್ನು ಗೆಲ್ಲಿಸಿಕೊಂಡು ಬರಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಸ್ಥಳೀಯವಾಗಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸೈಯದ್ ಸೈಫುಲ್ಲಾ ಸಹ ಮೈತ್ರಿ ಅಭ್ಯರ್ಥಿ ಮಂಜಪ್ಪನವರ ಪರವಾಗಿ ಪ್ರಚಾರ ನಡೆಸುತ್ತಿದ್ದು, ಅದಕ್ಕೆ ನಮ್ಮ ಕಡೆಯಿಂದಲೂ ಪೂರ್ಣ ಸಹಕಾರ ನೀಡಲಾಗುವುದು ಎಮದು ಹೇಳಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ಕಾರ್ಯಕರ್ತರು ಸಕ್ರಿಯವಾಗಿ ಚುನಾವಣೆಯಲ್ಲಿ ಪಾಲ್ಗೊಳ್ಳುವ ಮೂಲಕ ಹಳ್ಳಿ-ಹಳ್ಳಿಗೂ ಹೋಗಿ ಮತದಾರರನ್ನು ಮನವೊಲಿಸಬೇಕು. ಮೈತ್ರಿ ಅಭ್ಯರ್ಥಿ ಗೆಲ್ಲುವ ರೀತಿಯಲ್ಲಿ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕೆಂದು ಸಲಹೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಹಜ್ ಅಲ್ ಅಲ್ಲಾಬಕ್ಷ್, ಕೆ.ಮೈನುದ್ದೀನ್, ಬಷೀರ್ ಸಾಬ್, ಮೆಹಬೂಬ್ ಅಲಿ, ಮೌನೇಶ್ವರಿ ಚಾರಿ, ಶಬ್ಬೀರ್ ಸಾಬ್, ಸಿಗ್ಲಿ ಹುಸೇನ್ ಸಾಬ್, ರಾಟೆಮನೆ ರಾಜಾಸಾಬ್,ಖಾಸಿಮ್ ಸಾಬ್, ಎ.ನಾಗರಾಜ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
