ಹಿರಿಯೂರು :
ಪ್ರಧಾನಿ ನರೇಂದ್ರಮೋದಿ ಅವರ ಸಮರ್ಥ ನಾಯಕತ್ವ ಪಾರದರ್ಶಕ ಆಡಳಿತಕ್ಕೆ ದೇಶದ ಜನತೆ ಮನ್ನಣೆ ನೀಡಿದ್ದಾರೆ ಎಂಬುದಾಗಿ ಶಾಸಕಿ ಪೂರ್ಣಿಮಾಶ್ರೀನಿವಾಸ್ ತಿಳಿಸಿದರು.ನಗರದಲ್ಲಿ ಕಾರ್ಯಕರ್ತರ ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ಮೋದಿ ನೇತೃತ್ವದ ಸರ್ಕಾರ ದೇಶದ ಭದ್ರತೆ ಹಾಗೂ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಂಡ ದಿಟ್ಟ ನಿರ್ಧಾರಕ್ಕೆ ಮತದಾರರು ಮನ್ನಣೆ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಒಬಿಸಿ ಮೋರ್ಚಾ ರಾಜ್ಯಉಪಾಧ್ಯಕ್ಷ ಡಿ.ಟಿ.ಶ್ರೀನಿವಾಸ್, ಮುಖಂಡರಾದ ಎಂ.ಎಸ್.ರಾಘವೇಂದ್ರ, ಜಿ.ಪ್ರೇಮ್ಕುಮಾರ್, ದ್ಯಾಮಣ್ಣ, ಕೇಶವಮೂರ್ತಿ, ಹರೀಶ್, ಕಬಡ್ಡಿ, ಶ್ರೀನಿವಾಸ್, ಎಬಿವಿಪಿ ಯೋಗೇಶ್, ಗಂಗಾಧರ್ ಇತರರು ಭಾಗವಹಿಸಿದ್ದರು.