ಚಿತ್ರದುರ್ಗ;
ಭಾರತದ ಸ್ವತಂತ್ರ್ಯ ಹೋರಾಟಗಾರ, ಸ್ವತಂತ್ರ್ಯ ಭಾರತದ ಪ್ರಥಮ ಶಿಕ್ಷಣ ಸಚಿವರಾದ ‘ಮೌಲಾನಾ ಅಬುಲ್ ಕಲಾಂ ಆಜಾದ್’ ರವರ ಜನ್ಮ ದಿನವನ್ನು “ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ” ಆಚರಿಸಲಾಗುತ್ತಿದೆ ಎಂದು ‘ಎಸ್.ಎಸ್.ಕೆ.ಎಸ್. ಶಿಕ್ಷಣ ಮಹಾವಿದ್ಯಾಲಯದ’ ಪ್ರಾಂಶುಪಾಲರಾದ ‘ಡಾ. ಗಿರೀಶ್ ಟಿ’ ತಿಳಿಸಿದರು, ಚಿತ್ರದುರ್ಗ ನಗರದ ಶ್ರೀ ಸದ್ಗುರು ಕಬೀರಾನಂದ ಬಿ. ಇಡಿ. ಕಾಲೇಜನಲ್ಲಿ ಏರ್ಪಡಿಸಿದ್ದ “ರಾಷ್ಟ್ರೀಯ ಶಿಕ್ಷಣ ದಿನ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಬುಲ್ ಕಲಾಂ ಆಜಾದ್ ರವರು ಮಹಾತ್ಮ ಗಾಂಧೀಜಿಯವರ ಆತ್ಮೀಯ ಒಡನಾಡಿಯಾಗಿ ಭಾರತ ಸ್ವತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡವರು. ಅತ್ಯುತ್ತಮ ಬರಹಗಾರರಾದ ಕಲಾಂರವರು ತನ್ನ ಲೇಖನಗಳ ಮೂಲಕ ಬ್ರಿಟಿಷರ ಆಡಳಿತದ ವಿರುದ್ಧ ಹಾಗೂ ಭಾರತೀಯರಲ್ಲಿ ಹೋರಾಟ ಸಂಘಟನೆದ ಮನೋಭಾವನೆಯ ವಿಚಾರಗಳನ್ನು ಬರೆಯುತ್ತಿದ್ದರು. ಸ್ವತಂತ್ರ್ಯ ಹೋರಾಟದಲ್ಲಿ ಹಲವುಬಾರಿ ಸೆರೆಮನೆ ವಾಸವನ್ನು ಸಹ ಅನುಭವಿಸಿದರು. ಕಲಾಂರು ಭಾರತೀಯ ಕಾಂಗ್ರೇಸ್ನ ಅಧ್ಯಕ್ಷರಾಗಿಯೂ ಸಹ ಕಾರ್ಯ ನಿರ್ವಹಿಸಿದರು.
ಜೀವನಪೂರ್ಣ ಹಿಂದೂ-ಮುಸ್ಲಿಂರ ಐಕ್ಯತೆಗಾಗಿ ಶ್ರಮಿಸಿದ ಅಪ್ಪಟ ಭಾರತೀಯ. ದೇಶ ವಿಭಜನೆಯನ್ನು ವಿರೋಧಿಸಿ, ಅಖಂಡ ಭಾರತ ರಚನೆಗೆ ಒತ್ತು ನೀಡಿದವರು. ಸ್ವತಂತ್ರ್ಯ ಭಾರತದ ಸಚಿವ ಸಂಪುಟದಲ್ಲಿ ಇವರು ಪ್ರಥಮ ಶಿಕ್ಷಣ ಸಚಿವರಾಗಿ, ಶಿಕ್ಷಣದಲ್ಲಿ ಅಮೂಲಾಗ್ರ ಕಾರ್ಯಗಳನ್ನು ಮಾಡಿದವರು. ಭಾರತದ ಶಿಕ್ಷಣಕ್ಕೆ ಭದ್ರ ತಳಹದಿಯನ್ನು ರೂಪಿಸಿದವರು. ಶಿಕ್ಷಣ ವ್ಯವಸ್ಥೆ ಹಾಗೂ ಉನ್ನತ ಶಿಕ್ಷಣದ ರೂಪುರೇಷೆಯ ನಾಯಕತ್ವವಹಿಸಿ ಯಶಸ್ವಿಗೊಳಿಸಿದವರು. ಹಾಗಾಗಿ ಇವರ ಶೈಕ್ಷಣಿಕ ಸೇವೆಯ ಸವಿನೆನಪಿಗಾಗಿ ಇವರ ಜನ್ಮ ದಿನವನ್ನು “ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ” ಆಚರಿಸಲಾಗುತ್ತಿದೆ, ಕಲಾಂರಂತಹ ನಾಯಕರ ಗುಣಗಳು ಇಂದಿನ ಸಚಿವರಿಗೆ, ನಾಯಕರುಗಳಿಗೆ ಹಾಗೂ ಶೈಕ್ಷಣಿಕ ಚಿಂತಕರುಗಳಿಗೆ ಆದರ್ಶವಾಗಬೇಕಿದೆ. ಅಬುಲ್ ಕಲಾಂ ಆಜಾದ್ರಂತಹ ನಾಯಕರ ವಿಚಾರಗಳನ್ನು ಎಲ್ಲಿಯೂ ಓದಲು ಅವಕಾಶವಿಲ್ಲದ ಪರಿಣಾಮವಾಗಿ ಅವರ ಬಗ್ಗೆ ತಿಳಿಯುವಲ್ಲಿ ಅವಕಾಶವಂಚಿತರಾಗುತ್ತಿದ್ದೇವೆ. ಶಿಕ್ಷಣ ಕ್ಷೇತ್ರದಲ್ಲಿರುವವರು ಶಾಲಾಕಾಲೇಜುಗಳಲ್ಲಿ ಇಂತಹ ಹಲವು ವ್ಯಕ್ತಿಗಳ ಚಿಂತನೆಗಳನ್ನು ತಿಳಿಸುವಂತಹ ಕಾರ್ಯಗಳಾಗಬೇಕೆಂದು ಕರೆನೀಡಿದರು.
ಉಪನ್ಯಾಸಕರಾದ ಶ್ರೀಮತಿ ನೇತ್ರಾವತಿ ಮತ್ತು ಶ್ರೀಮತಿ ರೂಪ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಬಿ.ಇಡಿ. ಪ್ರಶಿಕ್ಷಣಾರ್ಥಿಯಾದ ರಂಗಸ್ವಾಮಿ ನಿರೂಪಿಸಿದರು, ಚಂದ್ರಮ್ಮ ಪ್ರಾರ್ಥಸಿದರು, ದಿಲೀಪ್ ಸ್ವಾಗತಿಸಿದರು, ದಿವ್ಯ ವಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
