ಬೆಂಗಳೂರು
ವಿಧಾನಪರಿಷತ್ನ ನೂತನ ಸದಸ್ಯರಾಗಿ ಪ್ರಕಾಶ್ ರಾಥೋಡ್, ಬಿ.ವಿ. ವೆಂಕಟೇಶ್ ಮತ್ತು ನಸೀರ್ ಅಹಮದ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಮೂವರು ವಿಧಾನಪರಿಷತ್ ಸದಸ್ಯರಾಗಿ ಭಗವಂತನ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ವಿಧಾನಪರಿಷತ್ನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಕಾಶ್ ರಾಥೋಡ್ ಮತ್ತು ಬಿ.ವಿ. ವೆಂಕಟೇಶ್ ವಿಧಾನಪರಿಷತ್ಗೆ ನಾಮ ನಿರ್ದೇಶನಗೊಂಡಿದ್ದರೆ, ನಸೀರ್ ಅಹಮದ್ ಅವರು ವಿಧಾನಸಭೆಯಿಂದ ವಿಧಾನಪರಿಷತ್ಗೆ ಆಯ್ಕೆಯಾಗಿದ್ದಾರೆ.
ಈ ಸದಸ್ಯರುಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜಹೊರಟ್ಟಿ, ವಿಧಾನಸಭಾಧ್ಯಕ್ಷ ರಮೇಶ್ಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್, ಸಚಿವರುಗಳಾದ ಶಿವಾನಂದಪಾಟೀಲ್, ಪ್ರಿಯಾಂಕ ಖರ್ಗೆ, ಮಾಜಿ ಸಚಿವ ಎಂ.ಬಿ. ಪಾಟೀಲ್, ಶಾಮನೂರು ಶಿವಶಂಕರಪ್ಪ, ಅಲ್ಲಂ ವೀರಭದ್ರಪ್ಪ, ಸಂಸದ ಮುನಿಯಪ್ಪ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರುಗಳು, ಶಾಸಕರುಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
