ಬೆಂಗಳೂರು
ಕಳೆದ 5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಪ್ರಗತಿಗೆ ಹಲವು ಯೋಜನೆಗಳನ್ನು ಜಾರಿ ಮಾಡಿದೆ.ಕೇಂದ್ರದ ಯೋಜನೆಗಳು ಜನತೆಯ ಪ್ರಶಂಸೆಗೆ ಪಾತ್ರವಾಗಿರುವುದರಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಯುವ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿಜೇಯೇಂದ್ರ ತಿಳಿಸಿದ್ದಾರೆ.
ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕೆನ್ನುವ ಸಂಕಲ್ಪದೊಂದಿಗೆ ಬಿಜೆಪಿ ಯುವ ಮೋರ್ಚಾ ನಗರದ ಚಿಕ್ಕಲಾಲ್ಬಾಗ್ ಬಳಿ ಹಮ್ಮಿಕೊಂಡಿದ್ದ ಬೈಕ್ ಝಾಥಾ ಚಾಲನೆ ನೀಡಿ ಮಾತನಾಡಿದ ಅವರು ಪ್ರzಧಾನಿ ಮೋದಿ ಅವರನ್ನು ಪ್ರಧಾನಿ ಮಂತ್ರಿ ಸ್ಥಾನದಲ್ಲಿ ನೋಡುವ ಉದ್ದೇಶದಿಂದ ಅವರು ಮಾಡಿರುವ ಜನಪರ ಯೋಜನೆಗಳನ್ನು ನಮ್ಮ ಯುವ ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು ಎಂದು ಕರೆ ನೀಡಿದರು.
ಮತ್ತೊಮ್ಮೆ ಪ್ರಧಾನಿ ಸಂಕಲ್ಪದೊಂದಿಗೆ ದೇಶದಾದ್ಯಂತ ಹಮ್ಮಿಕೊಂಡಿರುವ ಮಧ್ಯೆ ಪ್ರದೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಉಳಿದಂತೆ ದೇಶದ ಇತರ ಭಾಗಗಳಲ್ಲಿಯೂ ಮತ್ತೊಮ್ಮೆ ಮೋದಿಗಾಗಿ ಯುವಕರು ನಡೆಸುತ್ತಿರುವುದಾಗಿ ತಿಳಿಸಿದರು.
ನಂತರ ಮಾತನಾಡಿದ ಸಂಸದ ಪಿ.ಸಿ. ಮೋಹನ್, ಕಳೆದ 5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯಾರು ಮಾಡದ ಸಾಧನೆಯನ್ನು ಮಾಡಿದ್ದಾರೆ. ಮತ್ತೊಮ್ಮೆ ಭಾರತಕ್ಕೆ ನರೇಂದ್ರ ಮೋದಿಯವರು ಪ್ರಧಾನಿಯಾಗುವ ಅವಶ್ಯಕತೆಯಿದೆ. 5 ವರ್ಷಗಳಿಂದಲೂ ಕೈಗೊಂಡಿರುವ ಪ್ರಗತಿ ಪರ ಯೋಜನೆಗಳು ಮತ್ತು ಮುಂದುವರಿಯುವ ಉದ್ದೇಶದಿಂದ ಮತ್ತೊಮ್ಮೆ ಜನತೆ ಅವರನ್ನು ಪ್ರಧಾನಿಯನ್ನಾಗಿಸುವಲ್ಲಿ ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಪದಾಧಿಕಾರಿಗಳಾದ ಚಂದ್ರಶೇಖರ್, ಶಿವಕುಮಾರ್, ಸುಬ್ಬಣ್ಣ, ಸೇರಿದಂತೆ ಇತರ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/02/News-6-Vijayendra.jpg)