ಬೆಂಗಳೂರು:
ಮುಂದಿನ ತಿಂಗಳ 3ರಂದು ನಡೆಯಲಿರುವ ಐದು ಕ್ಷೇತ್ರಗಳ ಉಪಚುನಾವಣೆಗಾಗಿ ಆ ಪ್ರದೇಶದಲ್ಲಿ ಬರುವ ಎಲ್ಲ ಕಾರ್ಮಿಕರಿಗೆ ವೇತನಸಹಿತ ರಜೆಯನ್ನು ಎಲ್ಲಾ ವಾಣಿಜ್ಯ ಸಂಸ್ಥೆಗಳು ನೀಡಬೇಕೆಂದು ಕಾರ್ಮಿಕ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ನವೆಂಬರ್ 3ರಂದು ಬಳ್ಳಾರಿ, ಶಿವಮೊಗ್ಗ ಮತ್ತು ಮಂಡ್ಯ ಲೋಕಸಭೆ ಹಾಗೂ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಅಂದು ಆಯಾಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರ್ಖಾನೆ, ಹೊಟೇಲ್, ಅಂಗಡಿಯಲ್ಲಿ ಕೆಲಸ ಮಾಡುವ ಎಲ್ಲ ಕಾರ್ಮಿಕರಿಗೆ ವೇತನಸಹಿತ ರಜೆ ನೀಡಬೇಕೆಂದು ಆದೇಶ ಮಾಡಲಾಗಿದೆ.
![](https://prajapragathi.com/wp-content/uploads/2018/10/1828042.gif)