ಹುಳಿಯಾರು
ಒತ್ತಡದ ಜೀವನದ ನಡುವೆ ಆರೋಗ್ಯದ ಕಡೆ ಗಮನ ಹರಿಸದೆ ಬಳಲುವವರ ಸಂಖ್ಯೆ ಹೆಚ್ಚುತ್ತಿದ್ದು ವ್ಯಾಯಾಮ, ಧ್ಯಾನದ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಾಂಶುಪಾಲ ಪ್ರಸನ್ನಕುಮಾರ ಸಲಹೆ ನೀಡಿದರು.
ಸರ್ಕಾರಿ ಪದವಿಪೂರ್ವ ಕಾಲೇಜು ಹುಳಿಯಾರು-ಕೆಂಕೆರೆ ವತಿಯಿಂದ ಸಮೀಪದ ಚಿಕ್ಕಬಿದರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಎನ್ಎಸ್ಎಸ್ ಶಿಬಿರದಲ್ಲಿ ಉಚಿತ ನೇತ್ರಚಿಕಿತ್ಸಾ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮದಲ್ಲಿ ನಡೆಯುತ್ತಿರುವ ಆರೋಗ್ಯ ಶಿಬಿರದ ಸದುಪಯೋಗಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಶಿಬಿರದಲ್ಲಿ ತಿಪಟೂರಿನ ಸರ್ಕಾರಿ ಆಸ್ಪತ್ರೆಯ ನೇತ್ರ ಪರೀಕ್ಷಕರಾದ ಯುವರಾಜ್ ಯಾದವ್ ಮತ್ತು ಹುಳಿಯಾರಿನ ಸರ್ಕಾರಿ ಆಸ್ಪತ್ರೆಯ ನೇತ್ರ ಪರೀಕ್ಷಕರಾದ ಸಣ್ಣವೀರಪ್ಪ ಕಣ್ಣಿನ ಮಹತ್ವ ಮತ್ತು ಆರೋಗ್ಯದ ಬಗ್ಗೆ ಶಿಬಿರಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಪನ್ಯಾಸ ನೀಡುವುದರ ಜೊತೆಗೆ ಸುಮಾರು ನೂರು ಮಂದಿಯ ಕಣ್ಣಿನ ಪರೀಕ್ಷೆಯನ್ನು ಮಾಡಿದರು.
ಶಿಬಿರದಲ್ಲಿ ಶಿಬಿರಾಧಿಕಾರಿ ಶಶಿಭೂಷಣ್, ಉಪನ್ಯಾಸಕರುಗಳಾದ ಹೆಚ್.ಎಸ್.ನಾರಾಯಣ, ಬಸವರಾಜಪ್ಪ, ಹೇಮಂತ ಕುಮಾರ್, ರೇಣುಕಾ ಪ್ರಸಾದ್, ಶಿವರುದ್ರಯ್ಯ ಸೇರಿದಂತೆ ಊರಿನ ಮುಖಂಡರಾದ ರವಿ, ದಯಾನಂದ ಹಾಗೂ ಸಾರ್ವಜನಿಕರು ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
