ದಸರಾ 2018ರ ಉದ್ಘಾಟನೆಗೆ ಸುಧಾ ಮೂರ್ತಿ ಅವರಿಗೆ ಅಧಿಕೃತವಾಗಿ ಆಹ್ವಾನ

ಬೆಂಗಳೂರು

       ವಿಶ್ವ ವಿಖ್ಯಾತ ಮೈಸೂರು ದಸರಾ 2018ರ ಉದ್ಘಾಟನೆಗೆ ಇನ್ಪೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿ ಹಾಗೂ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ಇಂದು ಅಧಿಕೃತವಾಗಿ ಆಹ್ವಾನಿಸಲಾಯಿತು.

      ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ. ಟಿ. ದೇವೇಗೌಡ, ಸಚಿವ. ಸಾ. ರಾ, ಮಹೇಶ್, ಶಾಸಕ ರಾಮದಾಸ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರು ಆಹ್ವಾನಿಸಿದರು.

       ಆಹ್ವಾನ ಸ್ವೀಕರಿಸಿ ಮಾತನಾಡಿದ ಸುಧಾ ಮೂರ್ತಿ, ಮೈಸೂರು ದಸರಾ ನಮ್ಮ ನಾಡಿನ ಪ್ರತೀಕವಾಗಿದೆ. ಈಗ 68 ನೇ ವಯಸ್ಸಿಗೆ ದಸರಾ ನೋಡಲು ಉತ್ಸುಕಳಾಗಿದ್ದು, ರಾಜ್ಯ ಸರ್ಕಾರ ನನಗೆ ಆಹ್ವಾನ ನೀಡಿರುವುದು ತುಂಬಾ ಸಂತೋಷವಾಗಿದೆ. 10 ದಿನವೂ ಅಲ್ಲೇ ಇರಬೇಕು ಅಂದುಕೊಂಡಿದ್ದೇನೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ   

Recent Articles

spot_img

Related Stories

Share via
Copy link
Powered by Social Snap