ಬೆಂಗಳೂರು
ಆಟೋ ಡಿಕ್ಕಿ ಹೊಡೆದು ಸ್ಕೂಟರ್ನಲ್ಲಿ ಹೋಗುತ್ತಿದ್ದ ಸಪ್ತಗಿರಿ ಆಸ್ಪತ್ರೆಯ ನೌಕರರೊಬ್ಬರು ಮೃತಪಟ್ಟಿರುವ ದುರ್ಘಟನೆ ಜಾಲಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಸರುಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.
ಹುರುಳಿಚಿಕ್ಕನಹಳ್ಳಿಯ ಅಪ್ಪಾಜಪ್ಪ (55)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಸಪ್ತಗಿರಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದ ಅಪ್ಪಾಜಪ್ಪ ಅವರು ಶುಕ್ರವಾರ ಸಂಜೆ 4.40ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಹೊಂಡಾ ಆಕ್ಟೀವಾ ಸ್ಕೂಟರ್ನಲ್ಲಿ ಹೋಗುತ್ತಿದ್ದರು.
ಮಾರ್ಗಮಧ್ಯೆ ಹೆಸರುಘಟ್ಟ ಮುಖ್ಯರಸ್ತೆಯ ಬಾಲಸಾಗರ ಮ್ಯೂಜಿಕ್ ಅಕಾಡೆಮಿ ಮುಂಭಾಗ ಆಟೋ ಡಿಕ್ಕಿ ಹೊಡೆದು ಕೆಳಗೆಬಿದ್ದ ಅಪ್ಪಾಜಪ್ಪ ತಲೆಗೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಜಾಲಹಳ್ಳಿ ಸಂಚಾರ ಪೊಲೀಸರು ಅಪಘಾತವೆಸಗಿ ಪರಾರಿಯಾಗಿರುವ ಆಟೋ ಚಾಲಕನಿಗಾಗಿ ತೀವ್ರಶೋಧ ನಡೆಸಿದ್ದಾರೆ ಎಂದು ಡಿಸಿಪಿ ಸೌಮ್ಯಲತ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
