ಗಾಂಧಿನಗರ:
ದೇಶದಲ್ಲಿ ಕುತೂಹಲ ಕೆರಳಿಸಿದ್ದ ಪ್ರಕರಣಗಳಲ್ಲಿ ಒಂದಾದ ಸೋಹ್ರಾಬುದ್ದೀನ್ ಪ್ರಕರಣದಲ್ಲಿ ತೀರ್ಪು ನೀಡಿರುವ ಕೋರ್ಟ್ ಪ್ರಕರಣದ ಎಲ್ಲಾ ಆರೋಪಿತರನ್ನು ಖುಲಾಸೆ ಮಾಡಿ ಆದೇಶ ನೀಡಿದ ಬೆನ್ನಲೇ ಡಿಜಿಪಿ ವಂಜಾರ ಅವರು ಸ್ಫೋಟಕ ಹೇಳಿಕೆ ಒಂದನ್ನು ನೀಡಿದ್ದಾರೆ . ಒಂದುವೇಳೆ ಅಂದು ಸೋಹ್ರಾಬುದ್ದೀನ್ ಎನ್ ಕೌಂಟರ್ ಆಗದೇ ಹೋಗಿದ್ದರೆ ನಂತರಲ್ಲಿ ನೆರೆಯ ಪಾಕಿಸ್ತಾನ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಯೋಚಿಸಿತ್ತು ಎಂದು ತಿಳಿಸಿದ್ದಾರೆ.
ಅಂದು ಪೊಲೀಸರು ಸೋಹ್ರಾಬುದ್ದೀನ್ ಎನ್ ಕೌಂಟರ್ ಮಾಡದೇ ಹೋಗಿದ್ದರೆ ಇಷ್ಟರ ಹೊತ್ತಿಗೆ ಗುಜರಾತ್ ಮತ್ತೊಂದು ಕಾಶ್ಮೀರವಾಗಿರುತ್ತಿತ್ತು ಡಿಜಿ ವಂಜಾರ ಹೇಳಿದ್ದು ಕೇಂದ್ರದಲ್ಲಿದ್ದ ಯುಪಿಎ-ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರಗಳ ರಾಜಕೀಯ ಯುದ್ಧದಲ್ಲಿ ಗುಜರಾತ್, ರಾಜಸ್ಥಾನ ಹಾಗೂ ಆಂಧ್ರ ಪ್ರದೇಶದ ಪೊಲೀಸ್ ಅಧಿಕಾರಿಗಳನ್ನು ಬಲಿಪಶುಗಳನ್ನಾಗಿ ಮಾಡಲಯಿತು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/https-s3-ap-northeast-1.gif)