ಹುಳಿಯಾರು
ಹುಳಿಯಾರಿನ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೋವಿಡ್-19 ಮಾಹಿತಿ ಕರಪತ್ರದ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ಆಧ್ಯಾತ್ಮ ಶಿಕ್ಷಕಿ ಗೀತಕ್ಕ ಅವರು ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, ಕೊರೋನಾ ವೈರಸ್ ಸೋಂಕು ಹರಡುವುದರ ಬಗ್ಗೆ ಜನರಲ್ಲಿ ಇರುವ ಗೊಂದಲವನ್ನು ನಿವಾರಿಸಿ, ಸರಿಯಾದ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಧರ್ಮಸ್ಥಳ ಸಂಸ್ಥೆ ಕರಪತ್ರದ ಮೂಲಕ ಸಂಪೂರ್ಣ ಮಾಹಿತಿ ನೀಡುತ್ತಿರುವುದು ಸ್ವಾಗತಾರ್ಹ ಎಂದರು.
ಧರ್ಮಸ್ಥಳ ಯೋಜನೆಯ ವಲಯದ ಮೇಲ್ವಿಚಾರಕ ಮನುಕುಮಾರ್ ಮಾತನಾಡಿ, ಯೋಜನೆಯ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಸದಸ್ಯರಿಗೆ ಕೊರೊನಾ ಸೋಂಕಿನ ಭಯವನ್ನು ಹೋಗಲಾಡಿಸಿ ಅವರನ್ನು ಕೊರೊನಾ ವಾರಿಯರ್ಸ್ ಆಗಿ ಮಾಡಿಕೊಂಡು ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿಯನ್ನು ಮೂಡಿಸಲಾಗುವುದು ಎಂದರು. ಧರ್ಮಸ್ಥಳ ಯೋಜನೆಯ ಒಕ್ಕೂಟದ ಅಧ್ಯಕ್ಷ ದುರ್ಗರಾಜ್, ಸುಶೀಲಮ್ಮ ಹಾಗೂ ಸೇವಾ ಪ್ರತಿನಿಧಿ ಮೋಹನ್ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/14HULIYAR1.gif)