ಹರಪನಹಳ್ಳಿ :
ಪಕ್ಷದ ಹೈಕಮಾಂಡ್ ನನ್ನನ್ನು ಗುರುತಿಸಿ ಎರಡನೇ ಬಾರಿಗೆ ಸಚಿವ ಸ್ಥಾನ ನೀಡಿದ್ದು ಜವಾಬ್ದಾರಿ ಹೆಚ್ಚಿಸಿದೆ ಎಂದು ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ತಿಳಿಸಿದ್ದಾರೆ. ಲಂಬಾಣಿ ಸಮಾಜದ ಮೇಲೆ ಗೌರವವಿಟ್ಟು, ಹಡಗಲಿ ಕ್ಷೇತ್ರದ ಮೇಲೆ ನಂಬಿಕೆಯಿಟ್ಟು ಕಾಂಗ್ರೆಸ್ ಹೈಕಮಾಂಡ್ ಅವರು ನನಗೆ ಸಚಿವ ಸ್ಥಾನ ಕಲ್ಪಿಸಿದ್ದಾರೆ, ಮುಖಂಡರಿಗೆ ಅಬಿನಂಧನೆ ಸಲ್ಲಿಸುವುದಾಗಿ ಹೇಳಿದರು. ದೇಶದ ಇತಿಹಾಸದಲ್ಲಿ ದೇವರಾಜು ಅರಸು ತರುವಾಯ ಜನಪರ, ಬಡವರ ಪರವಾದ ಕೆಲಸ ಮಾಡಿದ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರದಲ್ಲಿಯೇ ಸಿಎಂ ಆಗಬೇಕೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಲ ಕೂಡಿ ಬಂದಾಗ ಸಿದ್ದರಾಮಯ್ಯ ಮತ್ತೊಂದು ಬಾರಿ ಮುಖ್ಯಮಂತ್ರಿ ಆಗುತ್ತಾರೆ ಎಂದು ತಿಳಿಸಿದರು. ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಅವರು ನಡೆಯುತ್ತಿರುವ ಪ್ರಯತ್ನದಲ್ಲಿ ಯಶಸ್ಸು ಕಾಣುವುದಿಲ್ಲ. ಊಹಾಪೋಹ ಮಾಡುತ್ತಿದ್ದಾರೆ. ಸಿದ್ದರಾಮಯ್ಯರ ಮಾರ್ಗದರ್ಶನ ಈ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಮೇಶ್ ಜಾರಕಿಹೊಳಿ ಅವರು ಯಡಿಯೂರಪ್ಪ ಅವರ ಜತೆ ಮಾತಾಡಿರುವ ವಿಷಯ ನನಗೆ ಗೊತ್ತಿಲ್ಲ. ಸರ್ಕಾರದಲ್ಲಿ ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದರು. ಬಳ್ಳಾರಿ ಜಿಲ್ಲಾ ಕಾಂಗ್ರೆಸ್, ಹೂವಿನ ಹಡಗಲಿ ಕ್ಷೇತ್ರದ ಪಕ್ಷದ ಮುಖಂಡರು ಅವರ ನಿವಾಸಕ್ಕೆ ಬೇಟಿ ನೀಡಿ ಶುಭಕೋರಿದರು. ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಅವರ ಇದೇ ವೇಳೆ ದೇವರ ತಿಮ್ಮಲಾಪುರ ಹಾಗೂ ಉಚ್ಚಂಗಿದುರ್ಗದ ಉಚ್ಚಂಗೆಮ್ಮ ದೇವಿ ದರ್ಶನ ಪಡೆದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಬೆಂಗಳೂರಿಗೆ ತೆರಳಿದರು. ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶಿವಯೋಗಿ, ಐಗೋಳ ಚಿದಾನಂದ, ಪಿ.ಎಲ್.ಪೋಮ್ಯನಾಯ್ಕ, ಪೂಜಾರ ಶಶಿಧರ, ಪಿ.ಟಿ.ಭರತ್, ಮಹ್ಮದ್ಗೌಸ್, ಅಟವಾಳಗಿ ಈರಣ್ಣ, ರವಿನಾಯ್ಕ, ತಿಮ್ಮನಾಯ್ಕ ಇತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
