ಬಳ್ಳಾರಿ
ಮುಜರಾಯಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು ಬಳ್ಳಾರಿ ನಗರಕ್ಕೆ ಫೆ.5ರಂದು ಆಗಮಿಸಲಿದ್ದಾರೆ.
ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು ಮಂಗಳವಾರ ಬೆಳಗ್ಗೆ 9ಕ್ಕೆ ಶ್ರೀ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಆರ್ಶೀವಾದ ಪಡೆದುಕೊಳ್ಳಲಿದ್ದಾರೆ. ನಂತರ ಅವರು ಬಳ್ಳಾರಿಯ ಸರಕಾರಿ ಅತಿಥಿಗೃಹದಲ್ಲಿ ಬೆಳಿಗ್ಗೆ 10ಕ್ಕೆ ಮಾಧ್ಯಮದವ ರೊಂದಿಗೆ ಅವರ ಇಲಾಖೆ ಹಾಗೂ ಇತರೆ ವಿಷಯಗಳ ಕುರಿತು ಮಾತನಾಡಲಿದ್ದಾರೆ. ನಂತರ ಅವರು ಪಕ್ಷದ ಮುಖಂಡರು, ಕಾರ್ಯಕರ್ತ ರೊಂದಿಗೆ ಚರ್ಚಿಸಲಿದ್ದಾರೆ. ಇದಾದ ನಂತರ ಅವರು ಮಧ್ಯಾಹ್ನ 1ಕ್ಕೆ ಬೆಂಗಳೂರಿಗೆ ವಿಮಾನದ ಮೂಲಕ ತೆರಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/02/parameshwarnayak-08-1465376.gif)