ಚಿಕ್ಕನಾಯಕನಹಳ್ಳಿ:
ತೋಟದ ಮನೆಯಲ್ಲಿ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಲಗೊಂಡನಹಳ್ಳಿ ಬಳಿಯಲ್ಲಿ ನಡೆದಿದೆ.ಬೇಟೆರಂಗನಹಳ್ಳಿ ಸರ್ವೇ ನಂ.26ರಲ್ಲಿ ಶಿವಯ್ಯ ಬಿನ್ ಲೇಟ್ ನರಸಿಂಹಯ್ಯನವರ ಜಮೀನಿನಲ್ಲಿ ಈ ದುರ್ಘಟನೆ ನಡೆದಿದ್ದು, ಜಮೀನಿನ ಮಾಲೀಕ ಶಿವಯ್ಯ(70) ಎಂಬಾತ ತಗಡಿನ ಶೀಟ್ನಿಂದ ನಿರ್ಮಿಸಿದ್ದ ಮನೆಯಲ್ಲಿದ್ದಾಗ ಈ ಘಟನೆ ಸಂಭವಿಸಿದೆ.ಸ್ಥಳದಲ್ಲೇ ಸಾವಿನ್ನಪ್ಪಿದ್ದಾನೆ. ಅಗ್ನಿ ಶಾಮಕದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.ಸ್ಥಳಕ್ಕೆ ಬೆಸ್ಕಾಂ ಶಾಖಾಧಿಕಾರಿ ಯೋಗೇಂದ್ರ ಭೇಟಿ ನೀಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ