ವ್ಯಕ್ತಿಯ ಮೇಲೆ ಸವರ್ಣಿಯನಿಂದ ಹಲ್ಲೆ : ಆಸ್ಪತ್ರೆಗೆ ದಾಖಲು

ಮಧುಗಿರಿ :

     ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೊಬ್ಬ ತಮ್ಮ ಜಮೀನಿನಲ್ಲಿ ಬೊರ್ ವೆಲ್ ಕೊರೆಸಿದಕ್ಕೆ ಖ್ಯಾತೆ ತೆಗೆದ ಪಕ್ಕದ ಜಮೀನಿನ ಸವರ್ಣಿಯನೊಬ್ಬ ಹಲ್ಲೆ ನಡೆಸಿರುವ ಘಟನೆ ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

      ಪರಿಶಿಷ್ಟ ಜಾತಿಯ ವ್ಯಕ್ತಿ ಹನುಮಂತರಾಯಪ್ಪ ತಮ್ಮ ಜಮೀನಿನಲ್ಲಿ ಬೊರ್ ವೆಲ್ ಕೊರೆಸಿದ್ದಾನೆ. ಬೊರ್ ವೆಲ್ ನಲ್ಲಿ ನೀರು ಸಿಕ್ಕುತ್ತಿದ್ದಂತೆ ಪಕ್ಕದ ಜಮೀನಿನ ಮಾಲಿಕ ಸವರ್ಣಿಯ ವ್ಯಕ್ತಿ ಹಾಗೂ ಮಾಜಿ ಗ್ರಾ ಪಂ ಸದಸ್ಯ ನರಸಿಂಹ ಮೂರ್ತಿ ಎಂಬಾತ ತಮ್ಮ ಬೊರ್ ವೆಲ್ ನಲ್ಲಿ ನೀರು ಕಡಿಮೆಯಾಗುತ್ತದೆಂದು ಖ್ಯಾತೆ ತೆಗೆದು ಹನುಮಂತರಾಯಪ್ಪ ಮೇಲೆ ಹಲ್ಲೆ ನಡೆಸಿದ್ದಾನೆ.

       ಕಬ್ಬಿಣದ ರಾಡ್ ನಿಂದ ಮನಬಂದಂತೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆ ಗೊಳಗಾದ ಹನುಮಂತ ರಾಯಪ್ಪನ ಕೈ ಹಾಗೂ ತೊಡೆಗೆ ಗಂಭೀರವಾಗಿ ಗಾಯಗಳಾಗಿದ್ದು ಮಧುಗಿರಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಭಾಗದಲ್ಲಿ ಪದೆ ಪದೆ ಸವರ್ಣಿಯರಿಂದ ಪರಿಶಿಷ್ಟ ಜಾತಿಯ ಸಮುದಾಯಗಳ ಮೇಲೆ ಪ್ರಕರಣಗಳು ನಡೆಯುತ್ತಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap