ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಂಗಳೂರು

        ದುಬಾರಿ ಕೆಟಿಎಂ ಬೈಕ್‍ನಲ್ಲಿ ಹೋಗುತ್ತಿದ್ದ ನಿವೃತ್ತ ರೈಲ್ವೆ ನೌಕರರೊಬ್ಬರು ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿರುವ ದುರ್ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಳಿ ನಡೆದಿದೆ.

         ನಿವೃಥ್ತ ರೈಲ್ವೆ ನೌಕರ ಗೌರಿಬಿದನೂರಿನ ಇಮಾಮ್ ಸನಾವುಲ್ಲಾ (67)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ . ದೇವನಹಳ್ಳಿಯಿಂದ ಬೆಂಗಳೂರು ಕಡೆಗೆ ಗುರುವಾರ ಬೆಳಿಗ್ಗೆ 11ರ ವೇಳೆ ಕೆಟಿಎಂ ಬೈಕ್‍ನಲ್ಲಿ ಸನಾವುಲ್ಲಾ ಬರುತ್ತಿದ್ದಾಗ ಕನ್ನಮಂಗಲ ಗೇಟ್ ಬಳಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.

         ಡಿಕ್ಕಿಯ ರಭಸಕ್ಕೆ ಹೆಲ್ಮೆಟ್ ಹಾರಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಸನಾವುಲ್ಲಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸನಾವುಲ್ಲಾ ನಿವೃತ್ತ ರೈಲ್ವೆ ನೌಕರರಾಗಿದ್ದಾರೆ. ಪ್ರಕರಣ ದಾಖಲಿಸಿರುವ ದೇವನಹಳ್ಳಿ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link