ಬೆಂಗಳೂರು
ಸಾಕು ಪ್ರಾಣಿಗಳಿಂದ ಮುನುಷ್ಯನಿಗೆ ಶಾಂತಿ, ನೆಮ್ಮದಿ ದೊರಕಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.
ಮೈಸೂರಿನಲ್ಲಿಂದು ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾಕುಪ್ರಾಣಿಗಳ ಪದರ್ಶನಕ್ಕೆ ಚಾಲನೆ ನೀಡಿದ ಬಳಿಕ ಅವರು ಈ ವಿಷಯ ತಿಳಿಸಿದರು. ಆಧುನಿಕ ಬದುಕಿನ ಜಂಜಾಟದಲ್ಲಿ ಮುನುಷ್ಯನಿಗೆ ನೆಮ್ಮದಿ ಶಾಂತಿ ಸಿಗಬೇಕಾದರೆ ದಿನದಲ್ಲಿ ಸ್ವಲ್ಪ ಸಮಯವಾದರೂ ಸಾಕುಪ್ರಾಣಿಗಳ ಜೊತೆ ಕಳೆಯಬೇಕು ಎಂದು ಸಲಹೆ ಮಾಡಿದರು.
ಮುಂಜಾನೆ ಅರಮನೆಯ ಅವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ ಜರುಗಿತು. ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಇದರಲ್ಲಿ ಒಂದು ಸಾವಿರದ 500ಕ್ಕೂ ಹೆಚ್ಚು ಯೋಗಪಟುಗಳು ಭಾಗಿಯಾಗಿದ್ದರು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯೋಗ ವರದಾನವಾಗಿದೆ ಆದ್ದರಿಂದ ಇದನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಜಿ.ಟಿ.ದೇವೇಗೌಡ ಹೇಳಿದರು ಈ ಸಂದರ್ಭದಲ್ಲಿ ಸಚಿವ ಸಾ. ರಾ ಮಹೇಶ್ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/I9WF371N-kZqF-621x414@LiveMint.gif)