ತುಮಕೂರು
ಮಾರಕ ರೋಗ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಈ ರೋಗದ ಬಗ್ಗೆ ಮಾಹಿತಿ ನೀಡಲು ಪ್ರಜಾಪ್ರಗತಿ ಹಾಗೂ ಪ್ರಗತಿ ಟಿವಿ ನಾಳೆ ಬೆಳಿಗ್ಗೆ 9ರಿಂದ 10 ಗಂಟೆವರೆಗೆ ಫೋನ್ಇನ್ ಕಾರ್ಯಕ್ರಮ ಏರ್ಪಡಿಸಿದೆ.
ಕೊರೊನಾ ವೈರಸ್ ಹೇಗೆ ಹರಡುತ್ತದೆ ಹಾಗೂ ಅದರ ನಿಯಂತ್ರಣ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ಬಿ ಆರ್ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಟಿ.ಎ. ವೀರಭದ್ರಯ್ಯ ಅವರು ಭಾಗವಹಿಸಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.ಕೊರೊನಾ ಸೋಂಕಿನ ಬಗ್ಗೆ ಿನ್ನು ಸವಿಸ್ತಾರವಾದ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳಿಗೆ 0816-2270004, 227005ಕ್ಕೆ ಕರೆ ಮಾಡಿ ವೈದ್ಯರಿಂದ ಮಾಹಿತಿ ಪಡೆಯಬಹುದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ