ಜಪಾನೀಸ್ ಟೌನ್‍ಶಿಪ್ ಸಂಬಂಧ ಚರ್ಚೆ ನಡೆಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು-

      ವಸಂತನರಸಾಪುರದಲ್ಲಿ ಕೈಗಾರಿಕಾ ವಲಯ ನಿರ್ಮಾಣವಾಗುತ್ತಿದ್ದು, ಇಲ್ಲಿಯೇ ಜಪಾನೀಸ್ ಟೌನ್‍ಶಿಪ್ ತೆರೆಯಲು ಸಹ ಮುಂದಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

      ಜಪಾನ ದೇಶದ ಕೌನ್ಸಿಲ್ ವಿಧಾನಸೌಧದಲ್ಲಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.ಹಿಂದಿನಿಂದಲೂ ಜಪಾನೀಸ್ ಟೌನ್‍ಶಿಪ್ ನಿರ್ಮಾಣದ ಕನಸು ಇದೆ. ವಸಂತನರಸಾಪುರಸಲ್ಲಿ ಈಗಾಗಲೇ ಭೂ ಸ್ವಾಧೀನ ಪ್ರಕ್ರಿಯೆ ಬಹುತೇಕ ನಡೆಯುತ್ತಿದೆ. ಅಲ್ಲಿನ ಮೂಲಸೌಕರ್ಯ ಒದಗಿಸಿಕೊಡುವ ಸಂಬಂಧ ಇನ್ನೆರಡು ದಿನದಲ್ಲಿ ಸಭೆ ಕರೆದಿದ್ದು ಆ ಸಂದರ್ಭದಲ್ಲಿ ಸಭೆಗೆ ತಾವೂ ಬರಬಹುದು ಎಂದು ಆಹ್ವಾನಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap