ಹಿರಿಯ ಸಾಹಿತಿ ಎಲ್ ಎನ್ ಶೇಷಗಿರಿರಾವ್ ಇನ್ನಿಲ್ಲ..!

ಬೆಂಗಳೂರು

     ಕನ್ನಡದ ಸಾಹಿತ್ಯ ಲೋಕದಲ್ಲಿ ಮರೆಯಲಾಗದ ಮರೆಯಲಾಗದ ಸಾಹಿತಿ ಪ್ರೊ.ಎಲ್ ಎಸ್ ಶೇಷಗಿರಿರಾವ್ ಅವರು ಇಂದು  ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 94 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ.

   ಶ್ರೀಯುತರು 1925 ಫೆಬ್ರವರಿ 16 ರಂದು ಧಾರವಾಡ ಜಿಲ್ಲೆಯಲ್ಲಿ ಜನಿಸಿದ್ದರು, ಸೆಂಟ್ರಲ್ ಕಾಲೇಜಿನಲ್ಲಿ ಪದವಿ ಪಡೆದು, ಬೆಂಗಳೂರಿನ ಇಂಟರ್ ಮೀಡಿಯಟ್ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು . ಕಾದಂಬರಿ ವಿಮರ್ಶೆ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡಿದ್ದ ಅವರು, ಅನೇಕ ಬಗೆಯ ಸಾಹಿತ್ಯ ಕೃಷಿ ಮಾಡಿ ಸೈ ಎನಿಸಿಕೊಂಡಿದ್ದರು.

    ಉಡುಪಿಯಲ್ಲಿ ನಡೆದಿದ್ದ 74 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಎಲ್ ಎಸ್ ಶೇಷಗಿರರಾವ್ ಅವರಿಗೆ, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಬಿ ಎಂ ಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap