ನಿಖಿಲ್ ವಿರೋಧಿಗಳ ಮೇಲೆ ಕಣ್ಣಿಟ್ಟ ಪೊಲೀಸ್ ಇಲಾಖೆ..!!!

ಮಂಡ್ಯ:

     ಲೋಕಸಭೆ ಚುನಾವಣೆ ಹತ್ತಿರವಾಗುತ್ತಾ ಹೋದಂತೆ ರೆಆಜ್ಯ ರಾಜಕೀಯದಲ್ಲಿ ಚುನಾವಣಾ ರಣಕಣ ರಂಗೇರುತ್ತಿದೆ ಅದರಲ್ಲೂ ಮಂಡ್ಯದಲ್ಲಿ ಚುನಾವಣಾ ಬಿಸಿ ಮುಗಿಲು ಮುಟ್ಟಿದೆ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುತ್ತಿರುವ ವ್ಯಕ್ತಿಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

      ನಿಖಿಲ್ ಗೋ ಬ್ಯಾಕ್ ಚಳುವಳಿ ಸೇರಿದಂತೆ ಜೆಡಿಎಸ್ ನಡೆ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ. ಇದರಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಹಾಗೂ ಜೆಡಿಎಸ್ ವಿರುದ್ಧ ಧ್ವನಿ ಎತ್ತುವವರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಲು ಗುಪ್ತಚರ ಇಲಾಖೆ ಮುಂದಾಗಿದೆ.

      ಜೆಡಿಎಸ್ ಬಗ್ಗೆ ಆಕ್ಷೇಪ, ಆಕ್ರೋಶ ಹೊರ ಹಾಕುತ್ತಿರುವವರು ನಿಜವಾಗಲೂ ಪಕ್ಷದ ಕಾರ್ಯಕರ್ತರೇ ಎನ್ನುವುದನ್ನು ಪತ್ತೆ ಹಚ್ಚಲು ಸಿಎಂ ಕುಮಾರಸ್ವಾಮಿ ಗುಪ್ತಚರ ಇಲಾಖೆಗೆ ಸೂಚಿಸಿದ್ದಾರೆ ಎನ್ನಲಾಗಿದೆ.

     ಸೂಚನೆ ಬಂದ ಹಿನ್ನೆಲೆಯಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿರುವ ಪೊಲೀಸರು ಪೋಸ್ಟ್ ಹಾಕುತ್ತಿರುವರ ಮಾಹಿತಿ ಕಲೆ ಹಾಕಲಾರಂಭಿಸಿದ್ದಾರೆ. ಮಾಹಿತಿ ಸಂಗ್ರಹಕ್ಕಾಗಿ ರಾಜ್ಯದ ಇಂಟಲಿಜೆನ್ಸ್ ಪೊಲೀಸರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ ಎನ್ನಲಾಗುತ್ತಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap