ಐಎಂಎ ಪ್ರಕರಣ: ಎಸ್ ಐ ಟಿ ಇಂದ ಪೊಲೀಸ್ ಇನ್ಸ್ ಪೆಕ್ಟರ್ ವಿಚಾರಣೆ..!

ಬೆಂಗಳೂರು

    ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಹಿಂದಿನ ಪೊಲೀಸ್ ಇನ್ಸ್‍ಪೆಕ್ಟರ್ ರಮೇಶ್‍ಅವರನ್ನು ಎಸ್‍ಐಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

    ಹಿಂದೆ ಕಮರ್ಷಿಯಲ್ ಸ್ಟ್ರೀಟ್ ಠಾಣಾಧಿಕಾರಿಯಾಗಿದ್ದ ಇನ್‍ಸ್ಪೆಕ್ಟರ್ ರಮೇಶ್‍ಗೆ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್ ನೀಡಲಾಗಿತ್ತು.ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದು, ಪ್ರಕರಣದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.
ಐಎಂಎ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‍ಐಟಿ ಅಧಿಕಾರಿಗಳು ಆರೋಪಿ ಮೊಹಮದ್ ಮನ್ಸೂರ್ ಖಾನ್‍ನಿಂದ ಹಣ ಪಡೆದಿದ್ದ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳು ಹಾಗೂ ಪೆÇಲೀಸರ ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ಅಧಿಕಾರಿಗಳು:

     ರಮೇಶ್ 2018ರಲ್ಲಿ ಮನ್ಸೂರ್ ಬಳಿ ಲಂಚ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.ಮನ್ಸೂರ್‍ನಿಂದ ಹಣ ಪಡೆದು ಆತನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಕೊಂಡಿರಲಿಲ್ಲ ಎನ್ನಲಾಗಿತ್ತು. ಈ ಹಿಂದೆ ಪುಲಕೇಶಿನಗರದ ಎಸಿಪಿಯಾಗಿದ್ದ ರಮೇಶ್‍ಕುಮಾರ್ ಅವರನ್ನು ಆ.4 ರಂದು ವಿಚಾರಣೆಗೆ ನಡೆಸಲಾಗಿತ್ತು.

    ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಅವರಿಂದಲೂ ಎಸ್‍ಐಟಿ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಪ್ರಕರಣದಲ್ಲಿ ಶಾಮೀಲಾದ ಇನ್ನಷ್ಟು ಸರ್ಕಾರಿ ಅಧಿಕಾರಿಗಳ ಬಗ್ಗೆ ಮಾಹಿತಿ ಸಿಕ್ಕಿದ್ದು, ಸದ್ಯದಲ್ಲೇ ಅವರ ವಿಚಾರಣೆ ನಡೆಸಲಾಗುವುದು ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link