ತುಮಕೂರು : ಬಿಸಿಯೂಟದ ಕಾರ್ಯಕರ್ತರನ್ನು ತಡೆದ ಪೊಲೀಸರು..!

ತುಮಕೂರು :

     ರಾಜಧಾನಿಯಲ್ಲಿ ಇಂದು ಬೆಳಿಗ್ಗೆಯಿಂದ ನಿಷೇದಾಘ್ನೆಯ ನಡುವೆ ನಡೆಯುತ್ತಿರುವ ಬಿಸಿಯೂಟದ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲ್ಲು ತೆರಳುತ್ತಿದ್ದ ಜಿಲ್ಲೆಯ ಮತ್ತು ಹೊರ ಜಿಲ್ಲೆಯಿಂದ ನಗರದ ಮೂಲಕ ಹಾದು ಹೋಗುತ್ತಿದ್ದ  ಬಿಸಿ ಊಟ ತಯಾರಿಕರನನ್ನ ತುಮಕೂರಿನಲ್ಲಿ ತಡೆ ಹಿಡಿಯಲಾಗಿದೆ.

    ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಬಾಗಲಕೋಟೆ, ಜಮಖಂಡಿ, ಮುಧೋಳ್ ಈಗೆ ಇನ್ನು ಹಲವು ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಿಸಿಊಟ ತಯಾರಕರನ್ನು ತುಮಕೂರಿನ ಸಿದ್ಧಗಂಗಾ ಮಠದ ಬಳಿ ಪೊಲೀಸರು ತಡೆಹಿಡಿದಿದ್ದಾರೆ.

    ಸುಮಾರು 1000 ಕ್ಕೂ ಹೆಚ್ಚು  ಕಾರ್ಯಕರ್ತರನ್ನು ಬೆಂಗಳೂರಿಗೆ ಹೋಗದಂತೆ ಜಿಲ್ಲೆಯ ಎ ಎಸ್ ಪಿ ನೇತೃತ್ವದಲ್ಲಿ ಇವರನ್ನು ತಡೆಹಿಡಿದಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap