ಬೆಂಗಳೂರು
ರಾಜ್ಯದಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದ ನಂತರ ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಚಟುವಟಿಕೆಗೆ ಸ್ಥಬ್ಧವಾಗಿದೆ.
ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಕ್ತಿ ಕೇಂದ್ರ ವಿಧಾನಸೌಧ – ವಿಕಾಸೌಧದಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ. ಅಧಿಕಾರಿಗಳು ರಜೆಯ ಮಜಾ ಅನುಭವಿಸುತ್ತಿದ್ದಾರೆ.
ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಕಾರ್ಯಕರ್ತರಿಲ್ಲದೇ ಬಿಕೋ ಎನುತ್ತಿವೆ. ರಾಜಕೀಯ ನಾಯಕರು ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳತ್ತ ತೆರಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಪ್ರದೇಶ ಕಾಂಗ್ರೆಸ್ ಸಮಿತಿ ಕೇಂದ್ರ ಕಚೇರಿ, ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಾದ ಜಗನ್ನಾಥ ಭವನ, ಶೇಷಾದ್ರಿಪುರದಲ್ಲಿರುವ ಜಾತ್ಯತೀತ ಜನತಾದಳ ಪಕ್ಷದ ಕೇಂದ್ರ ಕಚೇರಿಯಾದ ಜೆ.ಪಿ. ಭವನದಲ್ಲಿ ಕಾರ್ಯಕರ್ತರು ಸುಳಿಯುತ್ತಿಲ್ಲ. ರಾಜಕೀಯ ಪಕ್ಷಗಳ ಮುಖಂಡರ ಮನೆಗಳ ಮುಂದೆಯೂ ಕಾರ್ಯಕರ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
