ಹಾವೇರಿ :
ಜಮ್ಮು ಕಾಶ್ಮೀರದ ಪಲ್ವಾಮದಲ್ಲಿ ದಿ,14 ರಂದು ನಡೆದ ಆತ್ಮಾಹುತಿ ದಾಳಿಯಿಂದ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿರುವ ಘಟನೆಯನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ನಗರದ ಸಿದ್ದಪ್ಪ ಸರ್ಕಲಿನಲ್ಲಿ ಪ್ರತಿಭಟಿಸಿ, ಮೌನಾಚಾರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ದಾಳಿಯಲ್ಲಿ ಭಾಗಿಯಾದ ಉಗ್ರ ಸಂಘಟನೆಗಳಿಗೆ ಕೇಂದ್ರ ಸರ್ಕಾರ ನಿರ್ದಾಕ್ಷಿಣ್ಯ, ಸೂಕ್ತ ಕ್ರಮ ಕೈಗೊಳ್ಳಬೇಕು.ಇದೊಂದು ಅಮಾನವೀಯ ಕೃತ್ಯವಾಗಿದ್ದು, ಇಂತಹ ಘಟನೆ ಆಗದಂತೆ ನೋಡಿಕೊಳ್ಳವಂತಾಗಬೇಕು.ವೀರ ಮರಣ ಅಪ್ಪಿದ ಕುಟುಂಬ ವರ್ಗದವರಿಗೆ ನೋವು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ವಕೀಲರು ಪಾರ್ಥನೆಗೈದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








