ವಿದ್ಯುತ್ ಖಾಸಗೀಕರಣಕ್ಕೆ ವಿರೋಧ

ಚಿತ್ರದುರ್ಗ

     ವಿದ್ಯುತ್ ಖಾಸಗೀಕರಣ ವಿರೋಧಿಸಿ ಇಲಾಖೆಯ ಸಿಬ್ಬಂದಿಗಳು ಇಂದು ತಿಪ್ಪಜ್ಜಿ ಸರ್ಕಲ್ ಬಳಿ ಇರುವ ಬೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗಿಕರಣ ಮಾಡುವುದಕ್ಕಾಗಿ ಸುಗ್ರೀವಾಜ್ಞೆಯನ್ನು ತರಲು ಮುಂದಾಗಿದ್ದು, ಇದನ್ನು ವಿರೋಧಿಸಿ ಬೇಸ್ಕಂ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ, ನಂತರ ಕೆಲಸಗಳಿಗೆ ಹಾಜರಾಗಿದ್ದಾರೆ.

     ಕೇಂದ್ರ ಸರ್ಕಾರ ಇತ್ತಿಚಿನ ದಿನಗಳಲ್ಲಿ ಸರ್ಕಾರದ ವಲಯಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಇದರಿಂದ ಸಿಬ್ಬಂಧಿಗೆ ಮಾತ್ರವಲ್ಲದೆ ಗ್ರಾಹಕರಿಗೂ ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಿ, ಹಿಂದಿನಂತೆಯೇ ಸರ್ಕಾರಿ ಸ್ವಾಮ್ಯದಲ್ಲಿ ಮುಂದುವರೆಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ನೇತೃತ್ವವನ್ನು ಬಸವರಾಜ್ ವಹಿಸಿದ್ದು, ಇಲಾಖೆಯ ಸಿಬ್ಬಂಧಿಗಳು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap