ಚಿತ್ರದುರ್ಗ:
ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಮಂಡಳಿ ಕಾರ್ಯದರ್ಶಿ ರೋಹಿಣಿ ಸಿಂಧೂರಿಯನ್ನು ವರ್ಗಾವಣೆಗೊಳಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ವರ್ಗಾವಣೆಯನ್ನು ರದ್ದುಪಡಿಸುವಂತೆ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.
ಜಗತ್ತಿನ ಆರ್ಥಿಕತೆಯನ್ನು ರೂಪಿಸುವಲ್ಲಿ ಅತಿ ಮುಖ್ಯ ಪಾತ್ರ ವಹಿಸುತ್ತಿರುವ ಕರ್ನಾಟಕದಲ್ಲಿ ಕಲ್ಯಾಣ ಮಂಡಳಿಯ ಸೌಲಭ್ಯಗಳು ತ್ವರಿತಗತಿಯಲ್ಲಿ ಕಾರ್ಮಿಕರಿಗೆ ತಲುಪಿಸುವಲ್ಲಿ ರೋಹಿಣಿ ಸಿಂಧೂರಿ ಕಟ್ಟಡ ಕಾರ್ಮಿಕ ಮಂಡಳಿ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ನಿಷ್ಟೆ ಮತ್ತು ಪ್ರಾಮಾಣಿಕತೆಯಿಂದ ಯಾರ ಒತ್ತಡಕ್ಕೂ ಸೊಪ್ಪು ಹಾಕದೆ ನಿಷ್ಟುರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸದೆ ಸರ್ಕಾರ ಏಕಾಏಕಿಯಾಗಿ ವರ್ಗಾವಣೆ ಮಾಡಿರುವ ಹಿಂದೆ ಕಾಣದ ಕೈಗಳ ಪಿತೂರಿಯಿದೆ. ಹಾಗಾಗಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಮಂಡಳಿಯ ಕಾರ್ಯದರ್ಶಿ ಹುದ್ದೆಯಲ್ಲಿಯೇ ರೋಹಿಣಿ ಸಿಂಧೂರಿಯನ್ನು ಮುಂದುವರೆಸುವಂತೆ ಪ್ರತಿಭಟನಾನಿರತ ಕಾರ್ಮಿಕರು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕೆ.ಗೌಸ್ಪೀರ್, ಷೇಕ್ ಕಲೀಂ, ಮಹಮದ್ ಸಮೀವುಲ್ಲಾ, ವಿವೇಕಾನಂದ, ಅಬ್ದುಲ್ಲಾ, ದಾದಾಪೀರ್, ಲಕ್ಕಪ್ಪ, ಷಂಷೀರ್, ಡಾರ್ಜಿನ್ ರಾಜ, ಟಿ.ಸ್ವಾಮಿ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
