ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಲು ಸಲಹೆ

ಎಂ ಎನ್ ಕೋಟೆ

       ಹಾಸ್ಟೆಲ್‍ಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಜೊತೆಗೆ ಮಕ್ಕಳಿಗೆ ಗುಣ ಮಟ್ಟದ ಆಹಾರವನ್ನು ಕೊಡಬೇಕು ಎಂದು ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರಸಿಂಹಯ್ಯ ತಿಳಿಸಿದರು.

       ಗುಬ್ಬಿ ತಾಲ್ಲೂಕಿನ ಮಂಚಲದೊರೆ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ವಸತಿ ನಿಲಯದಲ್ಲಿ ಅಡುಗೆಗೆ ಸಂಬಂಧಪಟ್ಟ ಆಹಾರ ಪದಾರ್ಥಗಳನ್ನು ವೀಕ್ಷಿಸಿದರು. ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಒಳ್ಳೆಯ ಆಹಾರವನ್ನು ಕೊಡಬೇಕು, ಅವಧಿ ಮುಗಿದ ಪದಾರ್ಥಗಳನ್ನು ಮಕ್ಕಳಿಗೆ ಕೊಡಬಾರದು, ವಿದ್ಯಾರ್ಥಿ ನಿಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ಅಲ್ಲಿನ ಅಧಿಕಾರಿಗಳಿಗೆ ತಿಳಿಸಿದರು. ಕುಡಿಯುವ ನೀರಿನ ಸಮಸ್ಯೆ ಇದ್ದರೆ ನಮ್ಮ ಗ್ರಾಮ ಪಂಚಾಯಿತಿಯ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಎಲ್ಲ ಮಕ್ಕಳು ಗೈರು ಹಾಜರಾಗದಂತೆ ನೋಡಿಕೊಳ್ಳಬೇಕು. ರಾತ್ರಿಹೊತ್ತು ಮಕ್ಕಳನ್ನು ಹೊರಗಡೆ ಹೋಗದಂತೆ ಎಚ್ಚರವಹಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಊಟದ ವ್ಯವಸ್ಥೆ ಮಾಡುವಾಗ ಎಚ್ಚರಿಕೆಯಿಂದ ಅಡುಗೆ ತಯಾರು ಮಾಡಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಪಿಡಿಓ ರಾಜೇಂದ್ರ ಪ್ರಸಾದ್ , ಹಾಸ್ಟೆಲ್ ಮೇಲ್ವಿಚಾರಕ ರಮೇಶ್ ಹಾಗೂ ಸಿಬ್ಬಂದಿಗಳು ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link