ಬೆಂಗಳೂರು
ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಚಲನ-ವಲನದ ಮೇಲೆ ನಿಗಾ ಇಡುವ ಉದ್ದೇಶದಿಂದ ಕಳೆದ 24 ತಾಸುಗಳಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಎರಡು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿದ್ದಾರೆ.
ಮೇಗಲು ಗ್ರಾಮದ ಬಳಿ ಹಾಗೂ ರಾಜೇಂದ್ರಪುರ ಗ್ರಾಮದ ಬಳಿ ಈ ಆನೆಗಳಿಗೆ ರೇಡಿಯೋ ಕಾಲರ್ಗಳನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ ಮತ್ತು ಈ ಪ್ರದೇಶಗಳಲ್ಲಿ ಹಾವಳಿ ಉಂಟುಮಾಡುತ್ತಿರುವ ಎರಡು ಸಲಗಗಳನ್ನು ಸೆರೆಹಿಡಿಯಲು ಸಹ ಅರಣ್ಯ ಇಲಾಖೆ ಅನುಮತಿ ಪಡೆದುಕೊಂಡಿದೆ ಎಂದು ಜಿಲ್ಲಾ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಾಕು ಆನೆಗಳ ನೆರವು ಮತ್ತು ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು. ಈ ನಡುವೆ, ಜಿಲ್ಲೆಯ ಕೆಲವು ಗ್ರಾಮಗಳಿಗೆ ದೊಡ್ಡ ಸಮಸ್ಯೆಯಾಗಿರುವ ಮತ್ತೊಂದು ಸಲಗವನ್ನು ಬಂಧಿಸಬೇಕೆಂದೂ ಸಹ ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಕಾರ್ಯಾಚರಣೆಯನ್ನು ನಾಳೆ ಮುಂದುವರಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/11/DSC_0550.gif)