ಬೆಂಗಳೂರು
ಉದ್ಯಾನ ನಗರಿ ಬೆಂಗಳೂರಿನ ವಾತಾವರಣ ತಂಪಾಗಿದೆ. ಮೋಡ ಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ಆಗಾಗ ಕೆಲವು ಬಡಾವಣೆಗಳಲ್ಲಿ ಮಳೆಯೂ ಬರುತ್ತಿದೆ. ಇನ್ನೂ ಕೆಲವು ದಿನ ನಗರದಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು, ಉಡುಪಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿಯೇ ಇದೆ. ಬೆಂಗಳೂರು ನಗರದಲ್ಲಿ ಆಗಾಗ ಕೆಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಆದರೆ, ತಂಪಾದ ಗಾಳಿ ಬೀಸುತ್ತಿದೆ.ಶನಿವಾರ ಮತ್ತು ಭಾನುವಾರ ಬೆಂಗಳೂರಿನಲ್ಲಿ ಮಳೆಯಾಗಿದೆ.
ಬಿಬಿಎಂಪಿ ನಿಯಂತ್ರಣ ಕೊಠಡಿಗೆ ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಬಗ್ಗೆ ದೂರುಗಳು ಬಂದಿವೆ. ಮಳೆ ಸಂಬಂಧಿತ ಯಾವುದೇ ಸಮಸ್ಯೆಗಳನ್ನು ಎದುರಿಸಲು ಬಿಬಿಎಂಪಿ ಸಜ್ಜಾಗಿದೆ.ಮುಂಗಾರು ಚುರುಕಾಗಿರುವುದರಿಂದ ಈ ಬಾರಿ ನೈಋತ್ಯ ಮುಂಗಾರು ಅವಧಿ ಹೆಚ್ಚಾಗಲಿದೆ. ಅಂದರೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಕ್ಟೋಬರ್ 15ರ ತನಕ ಮಳೆಯಾಗಲಿದೆ. ಸರ್ಕಾರದ ಲೆಕ್ಕದ ಪ್ರಕಾರ ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ಮುಂಗಾರು ಮಳೆ ಸುರಿಯಬೇಕು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/09/psjsc54_heavy-rain-in-mumbai_625x300_04_September_19.gif)