ನವದೆಹಲಿ: 

ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಿವಾದಿತ ರಾಮಜನ್ಮ ಭೂಮಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 2019ರ ಜನವರಿಗೆ ಮುಂದೂಡಿದ್ದರಿಂದ ಬೇಸರಗೊಂಡಿರುವ ವಿಶ್ವ ಹಿಂದೂ ಪರಿಷತ್ ನ ಸಾಧ್ವಿ ಪ್ರಾಚಿ ಅವರು ಯಾರು ಏನೇ ಮಾಡಲಿ ಅಥವಾ ಏನೇ ಆಗಲಿ ಡಿಸೆಂಬರ್ 6ಕ್ಕೆ ಶ್ರೀ ರಾಮಮಂದಿರಕ್ಕೆ ಶಂಕುಸ್ಥಾಪನೆಯಾಗಲಿದೆ ಎಂದು ಹೇಳಿದ್ದಾರೆ.
ಸಾಧ್ವಿ ಪ್ರಾಚಿ ಅವರು ರಾಮಮಂದಿರ ನಿರ್ಮಾಣಕ್ಕೆ ಯಾರ ನೆರವೂ ಬೇಕಾಗಿಲ್ಲ ಶ್ರೀರಾಮಚಂದ್ರ ಮಂದಿರವನ್ನು ಧಾಂ ಧೂಂ ಎಂದು ನಿರ್ಮಾಣ ಮಾಡಲಾಗುವುದು ಎಂದು ಹೇಳುವ ಮೂಲಕ ತಮ್ಮ ಆತ್ಮವಿಶ್ವಾಸಭರಿತ ಮಾತುಗಳನ್ನಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
