ರಂಗಗೀತೋತ್ಸವ ಮತ್ತು ರಂಗ ಗೌರವ ಕಾರ್ಯಕ್ರಮ

ಕೊರಟಗೆರೆ

       ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ತುಮಕೂರು ಜಿಲ್ಲಾ ಹಾಗೂ ತಾಲ್ಲೂಕು ಕಲಾವಿದರ ಸಂಘ ಮತ್ತು ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ರಂಗಗೀತೋತ್ಸವ ಮತ್ತು ರಂಗ ಗೌರವಕಾರ್ಯಕ್ರಮವನ್ನು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಮೈಲಾರಪ್ಪನವರು ಉದ್ಘಾಟಿಸಿದರು.

       ಇದೇ ಸಂಧರ್ಭದಲ್ಲಿ ಹಿರಿಯ ಕಲಾವಿದರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಹೆಚ್.ಎಸ್ ಮಾರುತಿ, ಖಜಾಂಚಿ ಪುಟ್ಟಣ್ಣ, ನಿರ್ದೇಶಕ ಪಿಳ್ಳಲಿಂಗಯ್ಯ, ಹನುಮಂತರಾಜು, ಶ್ರೀನಿವಾಸ್, ಚಂದ್ರಕಾಂತ್ ಸೇರಿದಂತೆ ಇತರೆ ಕಲಾವಿದರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap