ಚಿತ್ರದುರ್ಗ
ಇನೋವಾ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ನಗರದ ಹೊರವಲಯದಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭಿರ ಗಾಯಗೊಂಡಿರುವ ಇತರೆ ನಾಲ್ಕು ಮಂದಿಯನನು ಚಿಕಿತ್ಸೆಗಾಗಿ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮದ್ಯಾಹ್ನ 3.30ರ ಸುಮಾರಿನಲ್ಲಿ ಸಮೀಪದ ಕುಂಚಿಗನಾಳ್ ಗ್ರಾಮದ ಬಳಿ ಈ ದುರಂತ ನಡೆದಿದೆ. ಬೆಂಗಳೂರು ಕಡೆಯಿಂದ ಬಾದಾಮಿಯ ಕಡೆಗೆ ತೆರಳಿದ್ದ ಇನೋವಾ ಕಾರು ಹಾಗೂ ಎದುರಿಗೆ ಬಂದ ಲಾರಿ ನಡುವ ಈ ದುರ್ಘಟನೆ ನಡೆದಿದ್ದು, ಇನೋವಾದಲ್ಲಿದ್ದ ನಾಲ್ವರು ಸ್ಥಳದಲ್ಲಿ ಮೃತ ಪಟ್ಟಿದ್ದಾರೆ.
ಮೃತಪಟ್ಟವರನ್ನು ಮಂಜುಳ, ಶೋಭಾ, ಸುಕಾನ್ಯ ಹಾಗು ಕಾರು ಚಾಲನೆ ಮಾಡುತ್ತಿದ್ದ ಆಶೋಕ್ ಎಂದು ಗುರ್ತಿಸಲಾಗಿದೆ. ಈ ಘಟನೆಯಲ್ಲಿ 28 ವರ್ಷದ ಪವಿತ್ರ, 70 ವರ್ಷದ ಶ್ಯಾಮಲಮ್ಮ 4ವರ್ಷದ ಹೆಣ್ಣು ಮಗು ಶ್ರೇಷ್ಟಾ ಮತ್ತು ಒಂದೂವರೆ ವರ್ಷದ ಮಗುವಿಗೆ ಗಾಯಗಳಾಗಿದ್ದು, ಇವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಹಾಗು ಎಸ್ಪಿ ಡಾ, ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನೋವಾ ಕಾರಿನ ಟೈರ್ ಬಸ್ರ್ಟ್ ಆಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದ್ದು , ಸಾವನಪ್ಪಿರುವರು ಮೂಲತಃ ಬೆಂಗಳೂರಿನ ಕೆಆರ್ ಪುರಂ ನಿವಾಸಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಪ್ರವಾಸಕ್ಕೆ ತೆರಳುವ ವೇಳೆ ಅವಘಡ ಸಂಭವಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
