ಬೆಂಗಳೂರು
ಬೆಂಗಳೂರಿನ ಮೆಜೆಸ್ಟಿಕ್ ಬಳಿ ಇರುವ ಮೆಟ್ರೋ ರೈಲ್ವೆ ನಿಲ್ದಾಣ ಹಾಗೂ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ನಡೆದಾಡುವ ದೇವರು ಎಂದು ಪ್ರಖ್ಯಾತರಾಗಿರುವ ತುಮಕೂರಿನ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರನ್ನು ಇಡಬೇಕೆಂದು ಭಾರತೀಯ ತೆರಿಗೆ ಮತ್ತು ಸುಂಕ ಪಾವತಿದಾರರ ಒಕ್ಕೂಟದ ಅಧ್ಯಕ್ಷ ಆರ್. ಪೂರ್ಣ ಚಂದ್ರ ಆಗ್ರಹಿಸಿದ್ದಾರೆ.
ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಕೋಟ್ಯಂತರ ಭಕ್ತರನ್ನು ಹೊಂದಿದ್ದು, ಲಕ್ಷಾಂತರ ವಿದ್ಯಾರ್ಥಿಗಳನ್ನು ಜ್ಞಾನವಂತರು, ಸುಸಂಸ್ಕೃತರು, ಸಂಪತ್ತನ್ನಾಗಿ ಮಾಡಿ ದೇಶಕ್ಕೆ ಹಾಗೂ ವಿಶ್ವದ ಪ್ರಗತಿಗಾಗಿ ಕೊಡುಗೆ ನೀಡಿದ್ದಾರೆ. ಸ್ವಾಮೀಜಿಯವರ ಹೆಸರನ್ನು ನಮ್ಮ ಮೆಟ್ರೋ ಬದಲಾಗಿ ‘ಡಾ ಶ್ರೀ ಶಿವಕುಮಾರ ಸ್ವಾಮೀಜಿ ಮೆಟ್ರೋ’ ಹಾಗೂ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ‘ಡಾ ಶ್ರೀ ಶಿವಕುಮಾರ ಸ್ವಾಮೀಜಿ ಬಸ್ ನಿಲ್ದಾಣ’ ಎಂದು ಬದಲಾಯಿಸಬೇಕೆಂದು ತಿಳಿಸಿದ್ದಾರೆ.
ಈ ಕುರಿತಂತೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಗೃಹ ಸಚಿವ ಎಂ.ಬಿ. ಪಾಟೀಲ್, ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಬೃಹತ್ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಈಶ್ವರ್ ಖಂಡ್ರೆ, ಪ್ರತಿ ಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಪತ್ರ ನೀಡಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವೆ ನಿರ್ಮಲ ಸೀತಾರಾಮ್ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ನಮ್ಮ ಮೆಟ್ರೋ ನಾಮಫÀಲಕದ ಬದಲಾಗಿ ಸಂಪೂರ್ಣವಾಗಿ ‘ಡಾ ಶ್ರೀ ಶಿವಕುಮಾರ ಸ್ವಾಮೀಜಿ ಮೆಟ್ರೋ’ ಎಂದು ಬದಲಾಯಿಸುವಂತೆ ಒತ್ತಾಯಿಸಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/01/siddaganga_vb_80-1.jpeg)