ಹೊಸಪೇಟೆ :
ಐ.ಪಿ.ಸಿ. ಕಾಯ್ದೆಗೆ ತಿದ್ದುಪಡಿ ತಂದು ಗಲ್ಲುಶಿಕ್ಷೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಇಲ್ಲಿನ ಅಖಿಲ ಭಾರತ ವಕೀಲರ ಸಂಘದ ಜಿಲ್ಲಾ ಸಮಿತಿ ಸದಸ್ಯರು ಉಪ ತಹಶೀಲ್ದಾರ್ ಅಮರನಾಥರಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಸಂಘದ ಪದಾಧಿಕಾರಿಗಳು, ಗಲ್ಲುಶಿಕ್ಷೆಯನ್ನು ಒಳಗೊಂಡಂತೆ ರಾಜದ್ರೋಹದ ಕಲಂ ಕೂಡ ರದ್ದುಪಡಿಸಬೇಕು. ಪೊಳೀಸರು ಎನ್ಕೌಂಟರ್ ಮಾಡಿದರೆ ವಿಚಾರಣಾ ನ್ಯಾಯಾಲಯದಲ್ಲಿ ಪ್ರಶ್ನಿಸಿ ಪ್ರಕರಣ ದಾಖಲಿಸಲು ನೇರ ಅವಕಾಶ ಕಲ್ಪಿಸಬೇಕು. ತ್ವರಿತ ನ್ಯಾಯಾದಾನಕ್ಕಾಗಿ ಅಗತ್ಯ ಮೂಲಸೌಕರ್ಯ ಕಲ್ಲಿಸಬೇಕು ಎಂದು ಒತ್ತಾಯಿಸಿದರು.
ಗಲ್ಲುಶಿಕ್ಷೆ ವಿಧಿಸಿದರೆ ಭವಿಷ್ಯದಲ್ಲಿ ಯಾರು ತಪ್ಪು ಮಾಡುವುದಿಲ್ಲ ಎನ್ನುವುದು ತಪ್ಪು. ಯಾವುದೇ ಅಪರಾಧ ಮಾಡಬೇಕಾದರೆ ಅಪರಾಧಿಯ ಮನಸ್ಥಿತಿ, ಪರಿಸ್ಥಿತಿ, ಉದ್ದೇಶ, ಸೇರಿದಂತೆ ಇತರೆ ಕಾರಣಗಳಿರುತ್ತವೆ. ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿ ಭಿನ್ನವಾಗಿರುವುದರಿಂದ ಎಲ್ಲರನ್ನು ತಕ್ಕಡಿಯಲ್ಲಿ ತೂಗುವುದು ತಪ್ಪಾಗುತ್ತದೆ ಎಂದು ಹೇಳಿದರು.ಈ ಸಂಧರ್ಭದಲ್ಲಿ ಅಖಿಲ ಭಾರತ ವಕೀಲರ ಸಂಘದ ಜಿಲ್ಲಾ ಕಾರ್ಯದರ್ಶಿ ಎ.ಕರುಣಾನಿಧಿ, ತಾಲೂಕು ಅಧ್ಯಕ್ಷ ಜಿ.ಕೊಟ್ರಗೌಡ, ಕಾರ್ಯದರ್ಶಿ ಕೆ.ಸಿ.ಶರಣಪ್ಪ, ಹಿರಿಯ ವಕೀಲ ಕೆ.ಪ್ರಹ್ಲಾದ, ಬಿಸಾಟಿ ಮಹೇಶ, ಕಲ್ಯಾಣಯ್ಯ, ಮಲ್ಲಿಕಾರ್ಜುನ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
