ಬೆಂಗಳೂರು
ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮೀಸಲು ಪೊಲೀಸ್ ಬೆಟಾಲಿಯನ್ ಸ್ಥಾಪಿಸಲು ಮಂಜೂರಾತಿ ನೀಡಬೇಕೆಂದು ಸಂಸದ ಜಿ.ಎಂ.ಸಿದ್ದೇಶ್ವರ್ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳಿ ತಾಲ್ಲೂಕುಗಳು ಸೂಕ್ಷ್ಮ ಪ್ರದೇಶಗಳಾಗಿದ್ದು, ಈ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೀಸಲು ಪೊಲೀಸ್ ಬೆಟಾಲಿಯನ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 11 ಕರ್ನಾಟಕ ಮೀಸಲು ಪೊಲೀಸ್ ಪಡೆಗಳಿವೆ. ಕಾನೂನು ಸುವ್ಯವಸ್ಥೆ ಪಾಲನೆ, ನಕ್ಸಲ್ ಚಟುವಟಿಕೆ ನಿಯಂತ್ರಣ, ಕೋಮು ಗಲಭೆಗಳ ನಿಯಂತ್ರಣಕ್ಕೆ ಇನ್ನೂ ಹೆಚ್ಚಿನ ಪಡೆಗಳ ಅವಶ್ಕಕತೆ ಇದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಿಗೆ ಈ ಪಡೆಗಳನ್ನು ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಜಿ.ಎಂ. ಸಿದ್ದೇಶ್ವರ್ ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ