ಮಡಿಕಲ್ ಕಾಲೇಜು ನಿರ್ಮಾಣಕ್ಕೆ ಪ್ರತ್ಯೇಕ ಹಣ ಬಿಡುಗಡೆಗೆ ಮನವಿ

ಚಿತ್ರದುರ್ಗ:

       ಬರಪೀಡಿತ ಚಿತ್ರದುರ್ಗಕ್ಕೆ ಮಂಜೂರಾಗಿರುವ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಪ್ರತ್ಯೇಕ ಹಣ ಬಿಡುಗಡೆಗೊಳಿಸಿ ಕಾಲೇಜಿಗೆ ನಿರ್ದೇಶಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಅಭಿವೃದ್ದಿ ಹೋರಾಟ ಸಮಿತಿಯಿಂದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‍ರವರಿಗೆ ಮನವಿ ಸಲ್ಲಿಸಲಾಯಿತು.

       ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಆರು ಜಿಲ್ಲೆಗಳಿಗೆ ಮೆಡಿಕಲ್ ಕಾಲೇಜಿಗೆ ಹಣ ಮಂಜೂರು ಮಾಡಿದ್ದಾರೆ. ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ವಿಳಂಭವಾಗುತ್ತಿರುವುದರಿಂದ ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಪ್ರತ್ಯೇಕ ಹಣ ಮೀಸಲಿಟ್ಟು ಕಾಲೇಜಿಗೆ ಪ್ರತ್ಯೇಕ ನಿರ್ದೇಶಕರನ್ನು ನೇಮಿಸುವಂತೆ ಮನವಿ ನೀಡಿರುವುದಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಅಭಿವೃದ್ದಿ ಹೋರಾಟ ಸಮಿತಿಯವರು ಉಪ ಮುಖ್ಯಮಂತ್ರಿಗೆ ಮನವರಿಕೆ ಮಾಡಿದರು.

       ಸರ್ಕಾರಿ ವೈದ್ಯಕೀಯ ಕಾಲೇಜು ಅಭಿವೃದ್ದಿ ಹೋರಾಟ ಸಮಿತಿಯವರ ಮನವಿಗೆ ಉತ್ತರಿಸಿರುವ ಮುಖ್ಯಮಂತ್ರಿಯವರ ಉಪ ಕಾರ್ಯದರ್ಶಿ ಅರುಣ್‍ಫುರ್ಟಾಡೋರವರು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವೈದ್ಯಕೀಯ ಶಿಕ್ಷಣ ಇಲಾಖೆ ಇವರಿಗೆ ಪತ್ರದ ಮೂಲಕ ಸೂಚಿಸಿರುವುದಾಗಿ ತಿಳಿಸಿದ್ದಾರೆ.ಸರ್ಕಾರಿ ವೈದ್ಯಕೀಯ ಕಾಲೇಜು ಅಭಿವೃದ್ದಿ ಹೋರಾಟ ಸಮಿತಿಯ ಗೌರವಾಧ್ಯಕ್ಷ ಜಿ.ಎಸ್.ಉಜ್ಜಿನಪ್ಪ, ಪ್ರಧಾನ ಕಾರ್ಯದರ್ಶಿ ಎನ್.ರಮಾನಾಗರಾಜ್, ಎಲ್.ತಿಪ್ಪೇಸ್ವಾಮಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link