ಆರ್.ಓ. ಘಟಕ ಚಾಲನೆಗೆ ಆಗ್ರಹ

ತುಮಕೂರು
    ತುಮಕೂರು ತಾಲ್ಲೂಕು ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಸುಮಾರು ಆರು ತಿಂಗಳುಗಳಾದರೂ, ಅದನ್ನು ಇನ್ನೂ ಸಾರ್ವಜನಿಕರ ಬಳಕೆಗೆ ತೆರೆದಿಲ್ಲದಿರುವುದರಿಂದ ಈ ಭಾಗದ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
    ಇಲ್ಲಿ ಘಟಕ ನಿರ್ಮಿಸಿ ಆರು ತಿಂಗಳುಗಳಾಗಿದ್ದು, ಈವರೆಗೆ ಇದನ್ನು ಪ್ರಾರಂಭಿಸಿಲ್ಲ. ಹೀಗಾಗಿ ಲಕ್ಷಾಂತರ ರೂ. ವಿನಿಯೋಗಿಸಿ ಘಟಕ ನಿರ್ಮಿಸಿದ್ದರೂ, ಈವರೆಗೆ ನಿರುಪಯುಕ್ತವಾದಂತಾಗಿದೆ. ಈ ಭಾಗದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಹೇಳಲಾಗುತ್ತಿದೆ.
     ಈ ಬಗ್ಗೆ ತುಮಕೂರು ತಾಲ್ಲೂಕು ಪಂಚಾಯಿತಿಯ ಅಧಿಕಾರಿಗಳ ಗಮನ ಸೆಳೆದರೂ, ಯಾವುದೇ ಪ್ರಯೋಜನ ಆಗುತ್ತಿಲ್ಲವೆಂದು ಜನರು ದೂರಿದ್ದಾರೆ. ಈಗಲಾದರೂ ಸಂಬಂಧಿಸಿದವರು ತುರ್ತಾಗಿ ಈ ಘಟಕವನ್ನು ಸಾರ್ವಜನಿಕ ಬಳಕೆಗೆ ಚಾಲನೆ ನೀಡಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap