ಬೆಂಗಳೂರು
ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ನಡೆದುಕೊಂಡು ಹೋಗುತ್ತಿದ್ದ ಬಿಇಎಲ್ನ ನಿವೃತ್ತ ನೌಕರರೊಬ್ಬರು ಮೃತಪಟ್ಟಿರುವ ದುರ್ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಸರುಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ
ಚಿಕ್ಕಬಾಣವಾರದ ಗಾಣಿಗರ ಹಳ್ಳಿಯ ಜಗನ್ನಾಥ್ (65)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಹೆಸರುಘಟ್ಟ ಮುಖ್ಯ ರಸ್ತೆಯ ನಾಡ ಕಚೇರಿ ಬಳಿ ಮಂಗಳವಾರ ಸಂಜೆ 6.30ರ ವೇಳೆ ಜಗನ್ನಾಥ್ ಅವರು ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಜಗನ್ನಾಥ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 9ರ ವೇಳೆ ಮೃತಪಟ್ಟಿದ್ದಾರೆ.
ಅಪಘಾತವೆಸಗಿದ ಬೈಕ್ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ತೀವ್ರ ಶೋಧ ನಡೆಸಲಾಗಿದೆ. ಬಿಇಎಲ್ ಕಂಪನಿಯಲ್ಲಿ ನಿವೃತ್ತರಾದ ನಂತರ ಜಗನ್ನಾಥ್ ಅವರು ಗಾಣಿಗರ ಹಳ್ಳಿಯಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು.ಪೀಣ್ಯ ಸಂಚಾರ ಪೆÇಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸೌಮ್ಯಲತಾ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
