ಮಂಗಳೂರು:
ಸ್ಕೂಟರ್ ಗೆ ಆಂಬುಲೆನ್ಸ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರೆಯೋರ್ವರು ಮೃತಪಟ್ಟ ಘಟನೆ ನಗರದ ಕೆಪಿಟಿ ಸರ್ಕಲ್ ನಲ್ಲಿ ಗುರುವಾರದಂದು ಸಂಭವಿಸಿದೆ.ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯಿಂದ ಕೇರಳದ ಕಡೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕೆಪಿಟಿ ಸಿಗ್ನಲ್ ಬಳಿ ಬರುತ್ತಿದ್ದಂತೆ ಸ್ಕೂಟರ್ ಗೆ ಹಿಂಬಂದಿಯಿಂದ ಢಿಕ್ಕಿ ಹೊಡೆದಿದೆ.ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/07/road-accident-1527968091397.jpg)