ಬೆಂಗಳೂರು
ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ ಸವದಿ ಗೆಲುವು ಸಾಧಿಸಿದರು. ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಭರ್ತಿ ಮಾಡಲು ಉಪ ಚುನಾವಣೆ ನಡೆದಿತ್ತು.ಸೋಮವಾರ ಬೆಳಗ್ಗೆಯಿಂದ ಮತದಾನ ಮಾಡಲು ಅವಕಾಶವಿತ್ತು. ವಿಧಾನಸಭೆಯ ಶಾಸಕರು ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಮತದಾನ ಮಾಡಿದರು. ಒಟ್ಟು 120 ಮತಗಳು ಚಲಾವಣೆಗೊಂಡಿದ್ದವು. 7 ಮತಗಳು ಅಸಿಂಧುವಾಗಿವೆ.
ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಮತ್ತು ಬಿಜೆಪಿಯ ಅಭ್ಯರ್ಥಿ ಲಕ್ಷ್ಮಣ ಸವದಿ 113 ಮತಗಳನ್ನು ಪಡೆದು ಜಯಗಳಿಸಿದರು. ಎದುರಾಳಿಗಳಾಗಿ ನಾಮಪತ್ರ ಸಲ್ಲಿಸಿದ್ದ ಇಬ್ಬರು ಕಣದಿಂದ ಹಿಂದೆ ಸರಿದ ಕಾರಣ ಲಕ್ಷ್ಮಣ ಸವದಿ ಗೆಲುವಿನ ಹಾದಿ ಸುಗಮವಾಗಿತ್ತು.
2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ ಸವದಿ ಯಡಿಯೂರಪ್ಪ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದರು. ಫೆಬ್ರವರಿ 26ರೊಳಗೆ ವಿಧಾನಸಭೆ, ಪರಿಷತ್ ಸದಸ್ಯರಾಗದಿದ್ದಲ್ಲಿ ಸಚಿವ ಸ್ಥಾನ ಕಳೆದುಕೊಳ್ಳಬೇಕಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
