ತುರುವೇಕೆರೆ
ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದ ಪ್ರತಿಯೊಬ್ಬ ಪ್ರಜೆ ಪಣ ತೊಡಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಲಕ್ಷ್ಮಿಜಯರಾಂ ತಿಳಿಸಿದರು.
ಪಟ್ಟಣದ ಕೆ.ಹಿರಣ್ಣಯ್ಯ ಬಯಲು ರಂಗ ಮಂದಿರದ ಆವರಣದಲ್ಲಿ ಗುರುವಾರ ಸಂಜೆ ತಾಲ್ಲೂಕು ಆಡಳಿತ, ಪಟ್ಟಣ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಂಜೆ ಹಮ್ಮಿಕೊಂಡಿದ್ದ ಮಕ್ಕಳ ಸಾಂಸ್ಕತಿಕ ಕಾರ್ಯಕ್ರಮ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ತಾಲ್ಲೂಕು ಕಲೆ, ಸಾಹಿತ್ಯ ಸೇರಿದಂತೆ ಎಲ್ಲಾ ರಂಗಗಳಲ್ಲಿ ನಾಡಿನಾದ್ಯಂತ ಹೆಸರು ಮಾಡಿದೆ. ತಾಲ್ಲೂಕಿನಲ್ಲಿ ಹಲವು ಜನರು ಕನ್ನಡ ನಾಡು ನುಡಿಗಾಗಿ ಶ್ರಮಿಸಿದ್ದಾರೆ. ಅದರಂತೆ ವಿದ್ಯಾರ್ಥಿಗಳಾದ ನೀವೆಲ್ಲಾ ನಾಡು ನುಡಿಗಾಗಿ ಶ್ರಮಿಸಬೇಕಿದೆ ಎಂದು ತಿಳಿಸಿದರು.
ಸಾಂಸ್ಕತಿಕ ಸಮಾರಂಭದ ಅಂಗವಾಗಿ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ, ಹಾವು ಕಡಿತಕ್ಕೆ ಔಷಧಿ ನೀಡಿ ರಾಜ್ಯ ಪ್ರಶಸ್ತಿ ಪುರಸ್ಕತರಾದ ರೆಹನಾಬೇಗಂ, ರೈತಸಂಘದ ಅಧ್ಯಕ್ಷ ಶ್ರೀನಿವಾಸ್ ಗೌಡ, ಮುಸ್ಲಿಂ ಮುಖಂಡ ಅಸ್ಲಾಂಪಾಷ, ಕಿಸಾನ್ ಸಂಘದ ಅಧ್ಯಕ್ಷೆ ಚಂದ್ರಕಲ, ಕನ್ನಡ ಕಾವಲು ಸಮಿತಿ ವೆಂಕಟೇಶ್, ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಸೋಮಶೇಖರ್, ಲಯನ್ಸ್ ಕ್ಲಬ್ ಅಧ್ಯಕ್ಷ ನಂಜೇಗೌಡ, ಆಟೋ ಚಾಲಕರ ಸಂಘದ ಅಧ್ಯಕ್ಷ ಗಂಗಾಧರ್ ಸೇರಿದಂತೆ ಅನೆಕ ಗಣ್ಯರನ್ನು ಸನ್ಮಾನಿಸಲಾಯಿತು. ಮಕ್ಕಳುಗಳು ನಡೆಸಿಕೊಟ್ಟ ಸಾಂಸ್ಕತಿಕ ಕಾರ್ಯಕ್ರಮ ಹಾಗೂ ನೃತ್ಯ ಪ್ರದರ್ಶನ ಪ್ರೇಕ್ಷಕರ ಮನಸೆಳೆದವು. ಸಾಂಸ್ಕತಿಕ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಜಿ.ಪಂ.ಸದಸ್ಯ ಎನ್.ಆರ್.ಜಯರಾಂ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಲಚ್ಚಿಬಾಬು, ಕಸಾಪ ತಾಲ್ಲೂಕು ಅಧ್ಯಕ್ಷ ನಂ.ರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜಣ್ಣ, ಶಿಕ್ಷಕರ ಸಂಘದ ಷಣ್ಮುಖಸ್ವಾಮಿ, ಸಾ.ಶಿ.ದೇವರಾಜು, ಸ.ನೌ.ಸಂ. ಕಾರ್ಯಾಧ್ಯಕ್ಷ ಪ್ರಹ್ಲಾದ್, ಥಾಮಸ್, ಕಮಲ್ ರಾಜ್, ನವೀನ್ ಬಾಬು, ಸುನಿಲ್ ಬಾಬು, ಪ್ರಕಾಶ್, ಚಂದ್ರಯ್ಯ, ರಂಗಪ್ಪ ಸೇರಿದಂತೆ ಇತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
