ದೇಶಕ್ಕಾಗಿಯೇ ಜನಪರ ಯೋಜನೆ, ಕಾಯ್ದೆ ಜಾರಿ

ಚಿತ್ರದುರ್ಗ:

        ದೇಶಕ್ಕೆ ಸ್ವಾತಂತ್ರ ಬಂದಾಗ ನಮ್ಮಲ್ಲಿ ಏನು ಇರಲಿಲ್ಲ. ಕಷ್ಟ ಕಾಲದಲ್ಲಿ ದೇಶದ ಅಧಿಕಾರ ಹಿಡಿದ ಕಾಂಗ್ರೆಸ್ ಅನೇಕ ಕಾಯಿದೆಗಳನ್ನು ಜಾರಿಗೆ ತಂದು ದೇಶದ ಜನರಿಗೆ ಜನಪರ ಯೋಜನೆಗಳನ್ನು ಕೊಡುಗೆಯಾಗಿ ನೀಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್ ಹೇಳಿದರು.

         ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ 134 ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

         ಕಾರ್ಯಕರ್ತರು ಶಕ್ತಿ ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚಾಗಿ ತೊಡಗಿಕೊಳ್ಳಿ. ದೇಶದಲ್ಲಿಯೇ ಕರ್ನಾಟಕ ಶಕ್ತಿ ಕಾರ್ಯಕ್ರಮದಲ್ಲಿ ಮೊದಲನೇ ಸ್ಥಾನದಲ್ಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಪಕ್ಷವನ್ನು ಗೆಲ್ಲಿಸಬೇಕಾಗಿರುವುದರಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯಕರ್ತರು ಈಗಿನಿಂದಲೇ ಪಕ್ಷ ಸಂಘಟನೆಗೆ ಶ್ರಮಿಸಿ ಎಂದು ಸೂಚಿಸಿದರು.

      ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್ ಮಾತನಾಡಿ ಬ್ರಿಟೀಷರ ದಾಸ್ಯದಿಂದ ದೇಶವನ್ನು ಹೊರತರುವುದಕ್ಕಾಗಿ ಹುಟ್ಟಿಕೊಂಡ ಕಾಂಗ್ರೆಸ್ ಪಕ್ಷ 134 ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ಸ್ವಾತಂತ್ರ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ದೊಡ್ಡ ದೊಡ್ಡ ಸವಾಲುಗಳನ್ನು ಎದುರಿಸಿಕೊಂಡು ಬಂದಿದೆ. ಇಪ್ಪತ್ತು ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಕಾಂಗ್ರೆಸ್ ಪಕ್ಷ ಎನ್ನುವುದನ್ನು ಕೋಮುವಾದಿ ಬಿಜೆಪಿ.ಪಕ್ಷದವರು ಮರೆಯಬಾರದು ಎಂದು ಎಚ್ಚರಿಸಿದರು.

         ದೇಶಕ್ಕೆ ಕಾಂಗ್ರೆಸ್ ಭದ್ರಬುನಾದಿ ಹಾಕಿದೆ. ಕಾರ್ಯಕರ್ತರು ಯಾರು ಆತ್ಮಸ್ಥೈರ್ಯವನ್ನು ಕಳೆದುಕೊಳ್ಳಬೇಡಿ. ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್.ಸಮ್ಮಿಶ್ರ ಸರ್ಕಾರವಿದೆ. ಮುಂದಿನ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ.ಯನ್ನು ಸೋಲಿಸಿ ರಾಹುಲ್‍ಗಾಂಧಿಯನ್ನು ದೇಶದ ಪ್ರಧಾನಿಯನ್ನಾಗಿ ಮಾಡುವ ಹೊಣೆಗಾರಿಕೆ ಕಾರ್ಯಕರ್ತರ ಮೇಲಿದೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಆರ್.ಶೇಷಣ್ಣಕುಮಾರ್ ಮಾತನಾಡುತ್ತ 1885 ರಲ್ಲಿ ಹುಟ್ಟಿಕೊಂಡ ಕಾಂಗ್ರೆಸ್ ಪಕ್ಷ ಅಂದಿನಿಂದಲೂ ಜಾತ್ಯಾತೀತ, ವರ್ಗಾತೀತವಾಗಿ ಬಡವರ ಪರ ಕೆಲಸ ಮಾಡುತ್ತಿದೆ. ಶೋಷಿತರನ್ನು ಧಮನ ಮಾಡುವವರ ವಿರುದ್ದ ಹುಟ್ಟಿಕೊಂಡಿದ್ದೆ ಕಾಂಗ್ರೆಸ್.

       ಆರ್.ಎಸ್.ಎಸ್., ಬಿಜೆಪಿ.ಯವರು ಯಾರು ದೇಶಕ್ಕಾಗಿ ಹೋರಾಡಿ ಜೈಲಿಗೆ ಹೋಗಿ ಬಂದಿಲ್ಲ. ಅಸಹಾಕಾರ ಚಳುವಳಿ, ಕ್ವಿಟ್ ಇಂಡಿಯಾ ಚಳುವಳಿ ಹುಟ್ಟಿದ್ದೇ ಕಾಂಗ್ರೆಸ್‍ನಿಂದ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

         ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ನಜ್ಮತಾಜ್, ಅಜ್ಜಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಲ್ಲಾಭಕ್ಷ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಿ.ಕೆ.ಮೀನಾಕ್ಷಿ, ಎ.ಸಾಧಿಕ್‍ವುಲ್ಲಾ, ಚಾಂದ್‍ಪೀರ್, ನಾಗರಾಜ್ ಜಾನ್ಹವಿ, ಎ.ಪಿ.ಎಂ.ಸಿ.ಉಪಾಧ್ಯಕ್ಷ ಜಯಣ್ಣ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಜಿ.ಮನೋಹರ್, ನ್ಯಾಯವಾದಿ ರವೀಂದ್ರ, ರಾಜಣ್ಣ, ಸುರೇಶ್ ಹೆಚ್.ಈಚಲನಾಗೇನಹಳ್ಳಿ ಸೇರಿದಂತೆ ಸೇವಾದಳದ ಜಿಲ್ಲಾ ಮಹಿಳಾ ಸಂಘಟಕಿ ಇಂದ್ರಮ್ಮ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link