ಟಿಡಿಆರ್ ಹಗರಣದಲ್ಲಿ ಮಾಹಿತಿ ಸೋರಿಕೆ : ದ್ವಿತೀಯ ದರ್ಜೆ ಸಹಾಯಕ ಸಸ್ಪೆಂಡ್

ಬೆಂಗಳೂರು:

       ಟಿಡಿಆರ್ ಹಗರಣದಲ್ಲಿ ಸಿಕ್ಕಿಕೊಂಡಿರುವ ಬಿಬಿಎಂಪಿ ಅಧಿಕಾರಿಗೆ ಎಸಿಬಿ ದಾಳಿಯ ಬಗ್ಗೆ ಮಾಹಿತಿ ಸೋರಿಕೆ ಮಾಡಿದ ಹಿನ್ನೆಲೆ ದ್ವಿತಿಯ ದರ್ಜೆ ಸಹಾಯಕ ಎಲ್.ಹನುಮಂತಯ್ಯ ಎಂಬುವರನ್ನು ಅಮಾನತುಗೊಳಿಸಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

      ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿಡಿಆರ್ ನೀಡುವಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದರೆನ್ನಲಾದ ಅಧಿಕಾರಿಗಳ ಮೇಲೆ ದಾಳಿ ನಡೆಸಲು ಎಸಿಬಿ ಮುಂದಾಗಿತ್ತು. ಆ ಹಿನ್ನೆಲೆಯಲ್ಲಿ ದಾಳಿ ನಡೆಸಲು ಅನುಮತಿ ಕೋರಿ ಪಾಲಿಕೆಯ ಆಯುಕ್ತರಿಗೆ ಪತ್ರ ಬರೆಯಲಾಗಿತ್ತು.ಅದಕ್ಕೆ ಪಾಲಿಕೆಯ ಆಯುಕ್ತರು ಅನುಮತಿ ನೀಡಿ ಪತ್ರ ಬರೆದಿದ್ದರು.

       ಆಯುಕ್ತರು ಬರೆದ ಪತ್ರವನ್ನು ಹನುಮಂತಯ್ಯ ರಹಸ್ಯವಾಗಿ ಟಿಡಿಆರ್ ಹಗರಣದಲ್ಲಿ ಭಾಗಿಯಾಗಿರುವ ಆರೋಪಿ ಕೃಷ್ಣಲಾಲ್‍ಗೆ ನೀಡಿದ್ದಾರೆ.ಎಸಿಬಿ ದಾಳಿಯ ವೇಳೆ ಆಯುಕ್ತರು ಎಸಿಬಿಗೆ ಬರೆದ ಪತ್ರ ಪತ್ತೆಯಾಗಿದ್ದು,ಪ್ರಕರಣ ಬೆಳಕಿಗೆ ಬಂದಿದೆ.ಆ ಹಿನ್ನೆಲೆ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸಿಬಿ ಪತ್ರ ಬರೆದ ಹಿನ್ನೆಲೆಯಲ್ಲಿ ಪಾಲಿಕೆಯ ಆಯುಕ್ತರು ಹನುಮಂತಯ್ಯರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap