ಮೈತ್ರಿ ಸರ್ಕಾರದ ಶಾಸಕರ ಗೌಪ್ಯ ಸಭೆ

ಬೆಂಗಳೂರು

       ಮಂತ್ರಿಮಂಡಲ ವಿಸ್ತರಣೆ ವಿಳಂಬ, ನಿಗಮ ಮಂಡಳಿಗಳ ನೇಮಕಾತಿ ನೆನೆಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರದ ಹದಿನೈದಕ್ಕೂ ಹೆಚ್ಚು ಶಾಸಕರು ಗೌಪ್ಯ ಸಭೆ ನಡೆಸಿದ್ದಾರೆ.ನಗರದ ಹೊರ ವಲಯದ ರೆಸಾಟ್ಸ್‍ನಲ್ಲಿ ಗುಪ್ತ ಸಭೆ ನಡೆದಿದ್ದು, ಮೈತ್ರಿ ನಾಯಕರ ವರ್ತನೆಯಿಂದ ರೋಸಿ ಹೋಗಿದ್ದಾರೆ.

      ಇದೇ ರೀತಿ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಬೆಳಗಾವಿ ವಿಧಾನಮಂಡಲ ಅಧಿವೇಶನದಿಂದಲೇ ದೂರ ಉಳಿಯಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲ ಅಧಿವೇಶನದ ಸಂದರ್ಭದಲ್ಲೇ ಬಂಡಾಯದ ಕಹಳೆ ಮೊಳಗಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

      ಅಧಿವೇಶನ ಸಂದರ್ಭದಲ್ಲಿ ಈ ಶಾಸಕರ ಸಂಖ್ಯೆ 25ಕ್ಕೆ ಏರಿಕೆಯಾಗುವ ನಿರೀಕ್ಷೆಯಿದ್ದು, ತೀವ್ರ ಸ್ಪರೂಪದ ಬಂಡಾಯಕ್ಕೂ ಇದು ನಾಂದಿಯಾಗುವ ನಿರೀಕ್ಷೆಯಿದೆ. ಮೈತ್ರಿ ಸರ್ಕಾರದಲ್ಲಿ ನಮ್ಮ ಕ್ಷೇತ್ರದ ಕೆಲಸ ಸಮರ್ಪಕವಾಗಿ ಆಗುತ್ತಿಲ್ಲ. ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿ ಈವರೆಗೆ ಬಿಡುಗಡೆಯಾಗಿಲ್ಲ. ಬರ ಪರಿಸ್ಥಿತಿ ಇದ್ದರೂ ಸಮಸ್ಯೆ ಬಗೆಹರಿಸಲು ಸಚಿವರು ಪ್ರಯಾಣಿಕ ಪ್ರಯತ್ನ ನಡೆಸುತ್ತಿಲ್ಲ ಎಂದು ಸಭೆಯಲ್ಲಿ ಈ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ. ಅಧಿವೇಶನ ಸಂದರ್ಭದಲ್ಲಿ ಅಸಮಾಧಾನ ಮತ್ತಷ್ಟು ತೀವ್ರಗೊಳ್ಳುವ ಆತಂಕ ಮೈತ್ರಿ ಸರ್ಕಾರದ ನಾಯಕರಿಗೆ ಉಂಟಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link