ಹೆಬ್ರಿ:
ಹೆಬ್ರಿ ಸಮೀಪದ ಮುನಿಯಾಲು ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಅದೇ ಶಾಲೆಯ ಇಬ್ಬರು ಶಿಕ್ಷಕರು ಸೆ.14ರಂದು ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ಶಾಲಾ ಪ್ರಾಂಶುಪಾಲ ಮತ್ತು ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು ಆದರೆ ಲಗುವಾಗಿ ಪರಿಗಣಿಸಿ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ವರ್ತನೆಯಿಂದ ಮನನೊಂದ ಯುವತಿ ಗುರುವಾರ ಪೋಷಕರೊಂದಿಗೆ ಬಂದು ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿಕ್ಷಕರಾದ ಮಂಜುನಾಥ್ ಮತ್ತು ಸುಧೀಂದ್ರ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು, ಅವರ ವಿರೋಧ ಕ್ರಮಕೈಗೊಳ್ಳದ ಪ್ರಾಂಶುಪಾಲ ರಾಮಕೃಷ್ಣ ಹೆಗ್ಡೆ ಮತ್ತು ಡಿಡಿಪಿಐ ಶೇಷಶಯನ ವಿರುದ್ಧ ಹೆಬ್ರಿ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳ ಡಿಎಸ್ಪಿ ಬೆಳ್ಳಿಯಪ್ಪ ತನಿಖೆ ನಡೆಸುತ್ತಿದ್ದಾರೆ.
